ರಾಷ್ಟ್ರೀಯ ವಿಪತ್ತು ಕಾಯ್ದೆಯಡಿ ಪರಿಹಾರ ನೀಡಬೇಕು ಮತ್ತು ಕುಟುಂಬದ ಒಬ್ಬರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು. ಪ್ರಾಂತ ರೈತ ಸಂಘ ಮತ್ತು ಬೀದಿಬದಿ ವ್ಯಾಪಾರಿಗಳ ಮಹಾಮಂಡಳಿ ಸದಸ್ಯರು ಮಂಗಳವಾರ ನಡೆದ ಪ್ರತಿಭಟನೆಯಲ್ಲಿದ್ದರು. ವಿಮ್ಸ್ ಆಸ್ಪತ್ರೆಯ ಶವಾಗಾರದ ಮುಂದೆ ಪ್ರತಿಭಟಿಸಿದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.ಸಾಕಮ್ಮ ಕೊರೊನಾ ವೈರಸ್ ನಿಯಂತ್ರಣ ಕಾರ್ಯದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸಿದ್ದಾರೆ. ಮೂರು ತಿಂಗಳ ಕೆಲಸದ ಒತ್ತಡ, ಅನಾರೋಗ್ಯದಿಂದ ಸತ್ತಿದ್ದಾರೆ. ₹10 ಲಕ್ಷ ಪರಿಹಾರ ನೀಡಬೇಕು ಎಂದುಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿ.ಎಸ್. ಶಿವಶಂಕರ್ ಒತ್ತಾಯಿಸಿದರು.