<p><strong>ಬೆಂಗಳೂರು: </strong>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದೇ 11 ರಿಂದ 31ರವರೆಗೆ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಲಸಿಕೆ ಹಾಕುವ ಅಭಿಯಾನ ಹಮ್ಮಿಕೊಂಡಿದೆ. ಈ ಅಭಿ ಯಾನದ ಮೂಲಕ 62 ಲಕ್ಷ ಮಕ್ಕಳನ್ನು ತಲುಪುವ ಗುರಿಯನ್ನು ಇಲಾಖೆ ಹೊಂದಿದೆ.</p>.<p>‘16 ವರ್ಷದವರೆಗಿನ ಮಕ್ಕಳಿಗೆ ಮಾರಣಾಂತಿಕ ಕಾಯಿಲೆ ತಡೆಯಲು ವಿವಿಧ ಲಸಿಕೆಗಳನ್ನು ನೀಡಲಾಗುತ್ತದೆ. ಒಂದೂವರೆ ವರ್ಷದ ಬಳಿಕ 5ರಿಂದ 6 ವರ್ಷದವರೆಗೆ ಡಿಪಿಟಿ ವರ್ಧಕ ಲಸಿಕೆ ನೀಡಬೇಕಾಗುತ್ತದೆ. ಈ ಲಸಿಕೆಯನ್ನು ಕೆಲ ಪೋಷಕರು ಮರೆತು ಬಿಡುತ್ತಾರೆ. ಶಾಲೆಗಳಲ್ಲಿ 1ನೇ ತರಗತಿ, 5ನೇ ತರಗತಿ ಹಾಗೂ 10ನೇ ತರಗತಿ ಮಕ್ಕಳಿಗೆ ಲಸಿಕೆ ನೀಡಲಾಗುವುದು’ ಎಂದು ಇಲಾಖೆಯ ಲಸಿಕಾ ವಿಭಾಗದ ಉಪನಿರ್ದೇಶಕಿಡಾ.ಬಿ.ಎನ್. ರಜನಿ ತಿಳಿಸಿದರು.</p>.<p>‘ರಾಜ್ಯದಲ್ಲಿ ಈವರೆಗೆ 583 ಅಧಿಕ ಡಿಫ್ತಿರಿಯಾ ಪ್ರಕರಣಗಳು ವರದಿ ಯಾಗಿದ್ದು, 28 ಮಂದಿ ಮರಣ ಹೊಂದಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಆದ್ದರಿಂದ ಆ ಭಾಗದ ಬಾಗಲಕೋಟೆ, ಬಳ್ಳಾರಿ, ಬೀದರ್, ಚಿತ್ರದುರ್ಗ, ಕೊಪ್ಪಳ, ವಿಜಯಪುರ, ಕಲಬುರ್ಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ 38 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದೇ 11 ರಿಂದ 31ರವರೆಗೆ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಲಸಿಕೆ ಹಾಕುವ ಅಭಿಯಾನ ಹಮ್ಮಿಕೊಂಡಿದೆ. ಈ ಅಭಿ ಯಾನದ ಮೂಲಕ 62 ಲಕ್ಷ ಮಕ್ಕಳನ್ನು ತಲುಪುವ ಗುರಿಯನ್ನು ಇಲಾಖೆ ಹೊಂದಿದೆ.</p>.<p>‘16 ವರ್ಷದವರೆಗಿನ ಮಕ್ಕಳಿಗೆ ಮಾರಣಾಂತಿಕ ಕಾಯಿಲೆ ತಡೆಯಲು ವಿವಿಧ ಲಸಿಕೆಗಳನ್ನು ನೀಡಲಾಗುತ್ತದೆ. ಒಂದೂವರೆ ವರ್ಷದ ಬಳಿಕ 5ರಿಂದ 6 ವರ್ಷದವರೆಗೆ ಡಿಪಿಟಿ ವರ್ಧಕ ಲಸಿಕೆ ನೀಡಬೇಕಾಗುತ್ತದೆ. ಈ ಲಸಿಕೆಯನ್ನು ಕೆಲ ಪೋಷಕರು ಮರೆತು ಬಿಡುತ್ತಾರೆ. ಶಾಲೆಗಳಲ್ಲಿ 1ನೇ ತರಗತಿ, 5ನೇ ತರಗತಿ ಹಾಗೂ 10ನೇ ತರಗತಿ ಮಕ್ಕಳಿಗೆ ಲಸಿಕೆ ನೀಡಲಾಗುವುದು’ ಎಂದು ಇಲಾಖೆಯ ಲಸಿಕಾ ವಿಭಾಗದ ಉಪನಿರ್ದೇಶಕಿಡಾ.ಬಿ.ಎನ್. ರಜನಿ ತಿಳಿಸಿದರು.</p>.<p>‘ರಾಜ್ಯದಲ್ಲಿ ಈವರೆಗೆ 583 ಅಧಿಕ ಡಿಫ್ತಿರಿಯಾ ಪ್ರಕರಣಗಳು ವರದಿ ಯಾಗಿದ್ದು, 28 ಮಂದಿ ಮರಣ ಹೊಂದಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಆದ್ದರಿಂದ ಆ ಭಾಗದ ಬಾಗಲಕೋಟೆ, ಬಳ್ಳಾರಿ, ಬೀದರ್, ಚಿತ್ರದುರ್ಗ, ಕೊಪ್ಪಳ, ವಿಜಯಪುರ, ಕಲಬುರ್ಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ 38 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>