ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ’ಕೆಆರ್ಎಸ್ ಜಲಾಶ
ಯವನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಅತ್ಯುತ್ಸಾಹ ತೋರುತ್ತಿದೆ. ಇದಕ್ಕಾಗಿ
₹1,500 ಕೋಟಿ ವೆಚ್ಚ ಮಾಡಲಾಗುತ್ತಿದೆ. ಕೃಷ್ಣಾ ನ್ಯಾಯಾಧೀಕರಣದ ತಡೆಯಾಜ್ಞೆ 2012ರಲ್ಲಿ ತೆರವುಗೊಂಡಿದೆ. ಆದರೆ, ಆ ಬಳಿಕ ಒಂದೇ ಒಂದು ಹೆಜ್ಜೆ ಮುಂದಿಟ್ಟಿಲ್ಲ. ತಾರತಮ್ಯ ಏಕೆ‘ ಎಂದು ಪ್ರಶ್ನಿಸಿದರು. ಕೆಆರ್ಎಸ್ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಯಾಪೈಸೆ ಖರ್ಚು ಮಾಡುತ್ತಿಲ್ಲ ಎಂದು ಶಿವಕುಮಾರ್ ಸಮಜಾಯಿಷಿ ನೀಡಿದರು.