<p><strong>ನವದೆಹಲಿ: </strong>ಕೋವಿಡ್–19 ಪೀಡಿತರ ಸಂಖ್ಯೆ ದಿನೇದಿನೇ ದ್ವಿಗುಣ ಗೊಳ್ಳುತ್ತ ಸಾಗಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ರೈಲು ನಿಲ್ದಾಣಗಳನ್ನು ವೈದ್ಯಕೀಯ ಸೌಲಭ್ಯಕ್ಕೆ ಬಳಸಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<p>ದೆಹಲಿ ಪೂರ್ವ ಭಾಗದಲ್ಲಿನ ಆನಂದ ವಿಹಾರ್ ಪ್ರದೇಶದಲ್ಲಿರುವ ಅತ್ಯಂತ ಜನನಿಬಿಡ ರೈಲು ನಿಲ್ದಾಣ ಹಾಗೂ ಶಕುರ್ ಬಸ್ತಿ ರೈಲು ನಿಲ್ದಾಣಗಳಲ್ಲಿ ಪ್ರತ್ಯೇಕ ಬೋಗಿಗಳನ್ನು (ಐಸೋ ಲೇಷನ್ ಕೋಚಸ್) ಇರಿಸಲು ಸಿದ್ಧಪಡಿ ಸಲಾಗುತ್ತಿದೆ.</p>.<p>ಈ ನಿಲ್ದಾಣಗಳಿಂದ ಅಸ್ಸಾಂ, ಬಿಹಾರ್, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದತ್ತ ತೆರಳುವ ಎಲ್ಲ ರೈಲುಗಳ ಸಂಚಾರವನ್ನು ಈ ನಿಲ್ದಾಣದಿಂದ ಸೋಮವಾರ<br />ದಿಂದಲೇ ರದ್ದುಪಡಿಸಿರುವ ರೈಲ್ವೆ ಇಲಾಖೆ, ಸೋಂಕಿತರ ಚಿಕಿತ್ಸೆಗೆ ಅನುಕೂಲ ಕಲ್ಪಿ ಸುವ ನಿಟ್ಟಿನಲ್ಲಿ ಬಳಸಲು ಮುಂದಾಗಿದೆ.</p>.<p>ಈ ಮೂಲಕ ಕೋವಿಡ್–19 ಸೋಂಕಿತರಿಗಾಗಿ ದೇಶದಲ್ಲೇ ಮೊದಲ ಬಾರಿಗೆ ರೈಲ್ವೆ ನಿಲ್ದಾಣಗಳನ್ನೇ ಮೀಸಲಿ ಡಲಾಗುತ್ತಿದೆ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.</p>.<p>ದೆಹಲಿ ಸರ್ಕಾರದೊಂದಿಗೆ ಇನ್ನೊಂದು ಸುತ್ತಿನ ಸಮಾಲೋಚನೆ ನಡೆಸಿದ ಬಳಿಕ ಇಲ್ಲಿ ಎಷ್ಟು ಕೋಚ್ಗಳನ್ನು ಇರಿಸಬೇಕು ಎಂಬ ನಿರ್ಧಾರ ಪ್ರಕಟಿಸಲಾಗುವುದು. ಬಹುಶಃ ಮಂಗಳವಾರ ಅಥವಾ ಬುಧವಾರದಿಂದ ಈ ಕೋಚ್ಗಳು ರೋಗಿಗಳ ಚಿಕಿತ್ಸೆಗೆ ಲಭ್ಯವಾಗಲಿವೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೋವಿಡ್–19 ಪೀಡಿತರ ಸಂಖ್ಯೆ ದಿನೇದಿನೇ ದ್ವಿಗುಣ ಗೊಳ್ಳುತ್ತ ಸಾಗಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ರೈಲು ನಿಲ್ದಾಣಗಳನ್ನು ವೈದ್ಯಕೀಯ ಸೌಲಭ್ಯಕ್ಕೆ ಬಳಸಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<p>ದೆಹಲಿ ಪೂರ್ವ ಭಾಗದಲ್ಲಿನ ಆನಂದ ವಿಹಾರ್ ಪ್ರದೇಶದಲ್ಲಿರುವ ಅತ್ಯಂತ ಜನನಿಬಿಡ ರೈಲು ನಿಲ್ದಾಣ ಹಾಗೂ ಶಕುರ್ ಬಸ್ತಿ ರೈಲು ನಿಲ್ದಾಣಗಳಲ್ಲಿ ಪ್ರತ್ಯೇಕ ಬೋಗಿಗಳನ್ನು (ಐಸೋ ಲೇಷನ್ ಕೋಚಸ್) ಇರಿಸಲು ಸಿದ್ಧಪಡಿ ಸಲಾಗುತ್ತಿದೆ.</p>.<p>ಈ ನಿಲ್ದಾಣಗಳಿಂದ ಅಸ್ಸಾಂ, ಬಿಹಾರ್, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದತ್ತ ತೆರಳುವ ಎಲ್ಲ ರೈಲುಗಳ ಸಂಚಾರವನ್ನು ಈ ನಿಲ್ದಾಣದಿಂದ ಸೋಮವಾರ<br />ದಿಂದಲೇ ರದ್ದುಪಡಿಸಿರುವ ರೈಲ್ವೆ ಇಲಾಖೆ, ಸೋಂಕಿತರ ಚಿಕಿತ್ಸೆಗೆ ಅನುಕೂಲ ಕಲ್ಪಿ ಸುವ ನಿಟ್ಟಿನಲ್ಲಿ ಬಳಸಲು ಮುಂದಾಗಿದೆ.</p>.<p>ಈ ಮೂಲಕ ಕೋವಿಡ್–19 ಸೋಂಕಿತರಿಗಾಗಿ ದೇಶದಲ್ಲೇ ಮೊದಲ ಬಾರಿಗೆ ರೈಲ್ವೆ ನಿಲ್ದಾಣಗಳನ್ನೇ ಮೀಸಲಿ ಡಲಾಗುತ್ತಿದೆ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.</p>.<p>ದೆಹಲಿ ಸರ್ಕಾರದೊಂದಿಗೆ ಇನ್ನೊಂದು ಸುತ್ತಿನ ಸಮಾಲೋಚನೆ ನಡೆಸಿದ ಬಳಿಕ ಇಲ್ಲಿ ಎಷ್ಟು ಕೋಚ್ಗಳನ್ನು ಇರಿಸಬೇಕು ಎಂಬ ನಿರ್ಧಾರ ಪ್ರಕಟಿಸಲಾಗುವುದು. ಬಹುಶಃ ಮಂಗಳವಾರ ಅಥವಾ ಬುಧವಾರದಿಂದ ಈ ಕೋಚ್ಗಳು ರೋಗಿಗಳ ಚಿಕಿತ್ಸೆಗೆ ಲಭ್ಯವಾಗಲಿವೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>