‘ಜೈಲು ಅಧಿಕಾರಿಗಳಿಂದ ತಾರತಮ್ಯ’:ಜೈಲು ಅಧಿಕಾರಿಗಳು ತಾರತಮ್ಯ ಎಸಗುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ‘ಪ್ರತಿಯೊಬ್ಬರಿಗೂ ಕುರ್ಚಿ ನೀಡಿದ್ದರೂ ನನಗೆ ಮಾತ್ರ ನೀಡಿಲ್ಲ. ತೀವ್ರವಾದ ಬೆನ್ನು ನೋವಿನಿಂದ ಬಳಲುತ್ತಿದ್ದೇನೆ’ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಈ ವೇಳೆ, ಜೈಲಿನಲ್ಲಿ ಅವರಿಗೆ ಕುರ್ಚಿ ಒದಗಿಸುವಂತೆ ನ್ಯಾಯಾಲಯ ಸೂಚಿಸಿತು. ಶಿವಕುಮಾರ್ ಅವರನ್ನು ಭೇಟಿಯಾಗಲು ಅವರ ಕುಟುಂಬದವರಿಗೆ ನ್ಯಾಯಾಲಯ ಅವಕಾಶ ಕಲ್ಪಿಸಿತು.