ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ರಾಜ್ಯ ಘಟಕ ಅಧ್ಯಕ್ಷ ಎಂ.ನರಸಿಂಹಯ್ಯ, ‘ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆಯು 48 ಲಕ್ಷಕ್ಕೂ ಹೆಚ್ಚು ಇದೆ. ನಮ್ಮ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಉದ್ಯೋಗದಿಂದಲೂ ವಂಚಿತರಾಗಿದ್ದಾರೆ. ಈ ಕಾರಣಕ್ಕಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಲು ಆಗ್ರಹಿಸುತ್ತಿದ್ದೇವೆ’ ಎಂದು ಹೇಳಿದರು.