<p><strong>ವಿಜಯಪುರ:</strong> ‘ಕೇಂದ್ರ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಬಿಡಿಗಾಸು ನೀಡಿಲ್ಲ ಎಂಬ ಆರೋಪ ಉತ್ತರ ಕರ್ನಾಟಕದಲ್ಲಿ ಬಲವಾಗಿದೆ. ಆದ್ದರಿಂದ ತಕ್ಷಣ ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಿಸಬೇಕು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರನ್ನು ಒತ್ತಾಯಿಸಿದರು.</p>.<p>ನಗರದಲ್ಲಿ ಶುಕ್ರವಾರ ನಡೆದ ನೆರೆ– ಬರ ಪರಿಹಾರ ಕುರಿತ ಸಮಾಲೋಚನೆಯಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲಾ ಸಚಿವರು, ಶಾಸಕರು ನಿಯೋಗದೊಂದಿಗೆ ನವದೆಹಲಿಗೆ ತೆರಳಿ ಪರಿಹಾರ ಬಿಡುಗಡೆ ಮಾಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಿ.ಸಿ.ಪಾಟೀಲ, ‘ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ’ ಎಂದರು. ಇದರಿಂದ ತೃಪ್ತರಾಗದ ಬಸನಗೌಡ, ‘ಜನರ ನಿರೀಕ್ಷೆ ಹುಸಿ ಆಗುವ ಮುನ್ನ ಈ ಕೆಲಸ ಮಾಡಿ’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಕೇಂದ್ರ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಬಿಡಿಗಾಸು ನೀಡಿಲ್ಲ ಎಂಬ ಆರೋಪ ಉತ್ತರ ಕರ್ನಾಟಕದಲ್ಲಿ ಬಲವಾಗಿದೆ. ಆದ್ದರಿಂದ ತಕ್ಷಣ ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಿಸಬೇಕು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರನ್ನು ಒತ್ತಾಯಿಸಿದರು.</p>.<p>ನಗರದಲ್ಲಿ ಶುಕ್ರವಾರ ನಡೆದ ನೆರೆ– ಬರ ಪರಿಹಾರ ಕುರಿತ ಸಮಾಲೋಚನೆಯಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲಾ ಸಚಿವರು, ಶಾಸಕರು ನಿಯೋಗದೊಂದಿಗೆ ನವದೆಹಲಿಗೆ ತೆರಳಿ ಪರಿಹಾರ ಬಿಡುಗಡೆ ಮಾಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಿ.ಸಿ.ಪಾಟೀಲ, ‘ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ’ ಎಂದರು. ಇದರಿಂದ ತೃಪ್ತರಾಗದ ಬಸನಗೌಡ, ‘ಜನರ ನಿರೀಕ್ಷೆ ಹುಸಿ ಆಗುವ ಮುನ್ನ ಈ ಕೆಲಸ ಮಾಡಿ’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>