ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಶಾಸಕರಿಂದಲೇ ನೆರೆ ಪರಿಹಾರಕ್ಕೆ ಮೊರೆ

Last Updated 27 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ವಿಜಯಪುರ: ‘ಕೇಂದ್ರ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಬಿಡಿಗಾಸು ನೀಡಿಲ್ಲ ಎಂಬ ಆರೋಪ ಉತ್ತರ ಕರ್ನಾಟಕದಲ್ಲಿ ಬಲವಾಗಿದೆ. ಆದ್ದರಿಂದ ತಕ್ಷಣ ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಿಸಬೇಕು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರನ್ನು ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ನಡೆದ ನೆರೆ– ಬರ ಪರಿಹಾರ ಕುರಿತ ಸಮಾಲೋಚನೆಯಲ್ಲಿ ಅವರು ಮಾತನಾಡಿದರು.

‘ಎಲ್ಲಾ ಸಚಿವರು, ಶಾಸಕರು ನಿಯೋಗದೊಂದಿಗೆ ನವದೆಹಲಿಗೆ ತೆರಳಿ ಪರಿಹಾರ ಬಿಡುಗಡೆ ಮಾಡಿಸಬೇಕು’ ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿ.ಸಿ.ಪಾಟೀಲ, ‘ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ’ ಎಂದರು. ಇದರಿಂದ ತೃಪ್ತರಾಗದ ಬಸನಗೌಡ, ‘ಜನರ ನಿರೀಕ್ಷೆ ಹುಸಿ ಆಗುವ ಮುನ್ನ ಈ ಕೆಲಸ ಮಾಡಿ’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT