ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿ ಕೇಂದ್ರಕ್ಕಾಗಿ ಒತ್ತಾಯ: ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

Last Updated 23 ಏಪ್ರಿಲ್ 2019, 4:49 IST
ಅಕ್ಷರ ಗಾತ್ರ

ಕಲಬುರ್ಗಿ: ಆಳಂದ ತಾಲ್ಲೂಕಿನ ದೇಗಾಂವ ಗ್ರಾಮದವರುಮತದಾನ ಬಹಿಷ್ಕರಿಸಿದ್ದಾರೆ.ಗ್ರಾಮವನ್ನುಗ್ರಾಮ ಪಂಚಾಯಿತಿ ಕೇಂದ್ರವನ್ನಾಗಿಸುವಂತೆ 2ವರ್ಷದಿಂದ ಒತ್ತಾಯಿಸುತ್ತಿದ್ದ ಗ್ರಾಮಸ್ಥರು ಇಂದು(ಏ.23) ಮತದಾನ ಮಾಡದಿರಲು ನಿರ್ಧರಿಸಿದ್ದಾರೆ.

ಗ್ರಾಮದಲ್ಲಿ 1339 ಮತದಾರರು ಇದ್ದು, ಇವರಲ್ಲಿ 698 ಪುರುಷ ಮತ್ತು 641 ಮಹಿಳಾ ಮತದಾರರು ಇದ್ದಾರೆ.ಗ್ರಾಮ ಪಂಚಾಯಿತಿ ಪುನರ್ ವಿಂಗಡಣೆಯಲ್ಲಿ ಮೊದಲು ಈ ಗ್ರಾಮದ ಹೆಸರು ಇತ್ತು. ಜಿಲ್ಲಾಧಿಕಾರಿಗಳು ದೇಗಾಂವ ಪಂಚಾಯಿತಿ ಘೋಷಣೆ ಮಾಡಿದ್ದರು. ಆದರೆ ನಂತರ ಗ್ರಾಮಪಂಚಾಯಿತಿಕೇಂದ್ರ ರದ್ದುಗೊಂಡು ಸಮೀಪದ ಹಾಳ ತಡಕಲ ಗ್ರಾಮಕ್ಕೆ ಗ್ರಾ.ಪಂಕೇಂದ್ರ ನೀಡಲಾಗಿದೆ.

ಜನಸಂಖ್ಯೆ ಹೆಚ್ಚು, ಮೂಲಭೂತ ಸೌಲಭ್ಯ ಹೊಂದಿರುವ ಈ ಗ್ರಾಮಕ್ಕೆ ಪಂಚಾಯಿತಿ ಕೇಂದ್ರ ನೀಡದ ಕಾರಣ ಜನರು ಇಂದು ಲೋಕಸಭೆ ಚುನಾವಣೆಗೆ ಮತದಾನ ಮಾಡದಿರಲು ನಿರ್ಧರಿಸಿದ್ದಾರೆ.

ತಹಶೀಲ್ದಾರ್ ಎಂ.ಎನ್.ಚೋರಗಸ್ತಿ ಗ್ರಾಮಸ್ಥರೊಂದಿಗೆ ಸಂಧಾನ ನಡೆಸಿದರೂ ಸಾಧ್ಯವಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT