<p><strong>ಬೆಂಗಳೂರು:</strong> ಕ್ವಾರಂಟೈನ್ ತಪ್ಪಿಸಿ ಮನೆಗೆ ಕಳುಹಿಸಲು ₹ 25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾದ ಆರೋಪಿ ಕೃಷ್ಣೇಗೌಡ (55) ಎಂಬುವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಬ್ಯಾಟರಾಯನಪುರ ನಿವಾಸಿ ಕೃಷ್ಣೇಗೌಡ, ಹೋಟೆಲ್ಗಳಿಗೆ ಗ್ರಾಹಕರನ್ನು ಕರೆದೊಯ್ಯುವ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದರು. ವೈದ್ಯ ಬಿ.ವೈ. ನಂದಾ ಎಂಬುವರು ನೀಡಿದ್ದ ದೂರಿನಡಿ ಅವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಇದೇ 16ರಂದು ದೆಹಲಿಯಿಂದ ಬಂದಿರುವ 70 ಪ್ರಯಾಣಿಕರನ್ನು ಗಾಂಧಿನಗರದ ದೀವಾ ಹೊಟೇಲ್ನಲ್ಲಿ 14 ದಿನಗಳ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಮೇ 18ರಂದು ಬೆಳಿಗ್ಗೆ 11ರ ಸುಮಾರಿಗೆ ಹೊಟೇಲ್ಗೆ ಬಂದಿದ್ದ ಕೃಷ್ಣೇಗೌಡ, ಕ್ವಾರಂಟೈನ್ನಲ್ಲಿದ್ದ ಬ್ರೀಜ್ ರಾಣಿ, ಪಿ.ಎಸ್. ಜೈನ್ ಹಾಗೂ ಪ್ರೇಮ್ಕುಮಾರ್ ಎಂಬುವರನ್ನು ಪರಿಚಯಿಸಿಕೊಂಡಿದ್ದರು.’</p>.<p>‘ಕ್ವಾರಂಟೈನ್ಗಾಗಿ ಆಗುತ್ತಿರುವ ಖರ್ಚಿನ ಬಗ್ಗೆ ಆರೋಪಿ ವಿಚಾರಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕ್ವಾರಂಟೈನ್ನಲ್ಲಿದ್ದವರು, ‘ದಿನಕ್ಕೆ ₹1,400 ಬಾಡಿಗೆಯಂತೆ ₹19,600 ಪಾವತಿಸಬೇಕು. ವೈದ್ಯಕೀಯ ಪರೀಕ್ಷೆಗೆ ₹ 8 ಸಾವಿರ ಕೊಡಬೇಕು’ ಎಂದಿದ್ದರು. ಅವಾಗಲೇ ಕೃಷ್ಣೇಗೌಡ, ‘ನನಗೆ ₹25 ಸಾವಿರ ಕೊಟ್ಟರೆ ವೈದ್ಯಕೀಯ ಪರೀಕ್ಷೆ ಬಳಿಕವೇ ಯಾವುದೇ ಕ್ವಾರಂಟೈನ್ ಇಲ್ಲದೇ ಮನೆಗೆ ಕಳಿಸುತ್ತೇನೆ’ ಎಂದು ಆಮಿಷವೊಡ್ಡಿದ್ದರು. ಈ ಸಂಗತಿ ದೂರಿನಲ್ಲಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಹಲವು ವರ್ಷಗಳಿಂದ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ ಆರೋಪಿ, ಹೋಟೆಲ್ ಮಾಲೀಕರ ಜೊತೆಯೂ ಸಂಪರ್ಕ ಇಟ್ಟುಕೊಂಡಿದ್ದರು. ಪ್ರಕರಣದಲ್ಲಿ ಮಾಲೀಕರ ಪಾತ್ರವೇನು ಎಂಬುದು ತನಿಖೆಯಿಂದ ತಿಳಿಯಬೇಕು’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕ್ವಾರಂಟೈನ್ ತಪ್ಪಿಸಿ ಮನೆಗೆ ಕಳುಹಿಸಲು ₹ 25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾದ ಆರೋಪಿ ಕೃಷ್ಣೇಗೌಡ (55) ಎಂಬುವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಬ್ಯಾಟರಾಯನಪುರ ನಿವಾಸಿ ಕೃಷ್ಣೇಗೌಡ, ಹೋಟೆಲ್ಗಳಿಗೆ ಗ್ರಾಹಕರನ್ನು ಕರೆದೊಯ್ಯುವ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದರು. ವೈದ್ಯ ಬಿ.ವೈ. ನಂದಾ ಎಂಬುವರು ನೀಡಿದ್ದ ದೂರಿನಡಿ ಅವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಇದೇ 16ರಂದು ದೆಹಲಿಯಿಂದ ಬಂದಿರುವ 70 ಪ್ರಯಾಣಿಕರನ್ನು ಗಾಂಧಿನಗರದ ದೀವಾ ಹೊಟೇಲ್ನಲ್ಲಿ 14 ದಿನಗಳ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಮೇ 18ರಂದು ಬೆಳಿಗ್ಗೆ 11ರ ಸುಮಾರಿಗೆ ಹೊಟೇಲ್ಗೆ ಬಂದಿದ್ದ ಕೃಷ್ಣೇಗೌಡ, ಕ್ವಾರಂಟೈನ್ನಲ್ಲಿದ್ದ ಬ್ರೀಜ್ ರಾಣಿ, ಪಿ.ಎಸ್. ಜೈನ್ ಹಾಗೂ ಪ್ರೇಮ್ಕುಮಾರ್ ಎಂಬುವರನ್ನು ಪರಿಚಯಿಸಿಕೊಂಡಿದ್ದರು.’</p>.<p>‘ಕ್ವಾರಂಟೈನ್ಗಾಗಿ ಆಗುತ್ತಿರುವ ಖರ್ಚಿನ ಬಗ್ಗೆ ಆರೋಪಿ ವಿಚಾರಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕ್ವಾರಂಟೈನ್ನಲ್ಲಿದ್ದವರು, ‘ದಿನಕ್ಕೆ ₹1,400 ಬಾಡಿಗೆಯಂತೆ ₹19,600 ಪಾವತಿಸಬೇಕು. ವೈದ್ಯಕೀಯ ಪರೀಕ್ಷೆಗೆ ₹ 8 ಸಾವಿರ ಕೊಡಬೇಕು’ ಎಂದಿದ್ದರು. ಅವಾಗಲೇ ಕೃಷ್ಣೇಗೌಡ, ‘ನನಗೆ ₹25 ಸಾವಿರ ಕೊಟ್ಟರೆ ವೈದ್ಯಕೀಯ ಪರೀಕ್ಷೆ ಬಳಿಕವೇ ಯಾವುದೇ ಕ್ವಾರಂಟೈನ್ ಇಲ್ಲದೇ ಮನೆಗೆ ಕಳಿಸುತ್ತೇನೆ’ ಎಂದು ಆಮಿಷವೊಡ್ಡಿದ್ದರು. ಈ ಸಂಗತಿ ದೂರಿನಲ್ಲಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಹಲವು ವರ್ಷಗಳಿಂದ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ ಆರೋಪಿ, ಹೋಟೆಲ್ ಮಾಲೀಕರ ಜೊತೆಯೂ ಸಂಪರ್ಕ ಇಟ್ಟುಕೊಂಡಿದ್ದರು. ಪ್ರಕರಣದಲ್ಲಿ ಮಾಲೀಕರ ಪಾತ್ರವೇನು ಎಂಬುದು ತನಿಖೆಯಿಂದ ತಿಳಿಯಬೇಕು’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>