<p><strong>ಬೆಂಗಳೂರು: </strong>ಕೊರೊನಾ ಸೋಂಕು ಭೀತಿ ನಡುವೆಯೇ ಡೆಂಗಿ ಜ್ವರ ಕೂಡ ಜನರನ್ನು ಕಾಡಲಾರಂಭಿಸಿದೆ. ರಾಜ್ಯದಲ್ಲಿ 1,823 ಡೆಂಗಿ ಪ್ರಕರಣಗಳು ವರದಿಯಾಗಿವೆ.</p>.<p>ಕಳೆದ ವರ್ಷ ಈ ವೇಳೆಗೆ ರಾಜ್ಯದಲ್ಲಿ 809 ಮಂದಿ ಈ ಜ್ವರದಿಂದ ಬಳಲಿದ್ದರು. ಮುಂಗಾರು ಮಳೆ ಪ್ರಾರಂಭವಾದ ಬಳಿಕ ಜ್ವರಕ್ಕೆ ಬಳಲಿದವರ ಸಂಖ್ಯೆ ಹೆಚ್ಚಳವಾಗಿತ್ತು. ವರ್ಷಾಂತ್ಯಕ್ಕೆ18,183 ಪ್ರಕರಣಗಳು ವರದಿಯಾಗಿದ್ದವು. ಅದರಲ್ಲಿ 17 ಮಂದಿ ಜ್ವರದ ತೀವ್ರತೆಯಿಂದ ಮೃತಪಟ್ಟಿದ್ದರು.ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಕಾಡುವ ಜ್ವರ, ಈ ವರ್ಷ ಅವಧಿಗೂ ಮುನ್ನವೇ ಸಾವಿರಕ್ಕೂ ಅಧಿಕ ಮಂದಿಯನ್ನು ಅಸ್ವಸ್ಥಗೊಳಿಸಿರುವುದು ಆತಂಕಕ್ಕೆ ಕಾರಣವಾಗಿದೆ.</p>.<p>ಮನೆಯ ಸುತ್ತಮುತ್ತಲಿನ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ಮಳೆ ನೀರಿನಿಂದ ಈಡಿಸ್ ಜಾತಿಯ ಸೊಳ್ಳೆಗಳು ಉತ್ಪತ್ತಿಯಾಗಲಿದ್ದು, ಆ ಸೊಳ್ಳೆಗಳ ಕಡಿತದಿಂದ ಡೆಂಗಿ ಜ್ವರ ಬರುತ್ತದೆ. ಕಳೆದ ನಾಲ್ಕು ವರ್ಷಗಳಲ್ಲಿ 46,958 ಮಂದಿ ಡೆಂಗಿ ಜ್ವರದಿಂದ ಬಳಲಿದ್ದಾರೆ. 39 ಮಂದಿ ಸಾವಿಗೀಡಾಗಿದ್ದಾರೆ. ಈ ಜ್ವರಕ್ಕೆ ಲಸಿಕೆ ಲಭ್ಯ ಇಲ್ಲದ ಪರಿಣಾಮ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು, ವಾಕರಿಕೆ, ವಾಂತಿ ಹಾಗೂ ಆಂತರಿಕ ರಕ್ತಸ್ರಾವ ಡೆಂಗಿ ಜ್ವರದ ಪ್ರಮುಖ ಲಕ್ಷಣವಾಗಿದೆ.</p>.<p>‘ಮುಂಗಾರು ಮಳೆ ಪ್ರಾರಂಭವಾದ ಬಳಿಕ ಡೆಂಗಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈಡಿಸ್ ಎಂಬ ಸೊಳ್ಳೆ ಕಡಿತದಿಂದ ಈ ಜ್ವರ ಒಬ್ಬರಿಂದ ಮತ್ತೊಬ್ಬರಿಗೆ ಬಹುಬೇಗ ಹರಡುತ್ತದೆ. ಹಗಲು ಹೊತ್ತಿನಲ್ಲಿ ಕಚ್ಚುವ ಈ ಸೊಳ್ಳೆ, ಸಂಗ್ರಹಿಸಿಟ್ಟ ನೀರಿನಲ್ಲಿ ಮೊಟ್ಟೆಯಿಟ್ಟು, ಸಂತಾನೋತ್ಪತ್ತಿ ಮಾಡುತ್ತದೆ. ಜನರಲ್ಲಿ ಸ್ವಚ್ಛತೆ ಬಗ್ಗೆ ಇರುವ ಅಸಡ್ಡೆ ಹಾಗೂ ಜಾಗೃತಿ ಕೊರತೆ ರೋಗ ಹೆಚ್ಚಳಕ್ಕೆ ಪ್ರಮುಖ ಕಾರಣ’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ಸೋಂಕು ಭೀತಿ ನಡುವೆಯೇ ಡೆಂಗಿ ಜ್ವರ ಕೂಡ ಜನರನ್ನು ಕಾಡಲಾರಂಭಿಸಿದೆ. ರಾಜ್ಯದಲ್ಲಿ 1,823 ಡೆಂಗಿ ಪ್ರಕರಣಗಳು ವರದಿಯಾಗಿವೆ.</p>.<p>ಕಳೆದ ವರ್ಷ ಈ ವೇಳೆಗೆ ರಾಜ್ಯದಲ್ಲಿ 809 ಮಂದಿ ಈ ಜ್ವರದಿಂದ ಬಳಲಿದ್ದರು. ಮುಂಗಾರು ಮಳೆ ಪ್ರಾರಂಭವಾದ ಬಳಿಕ ಜ್ವರಕ್ಕೆ ಬಳಲಿದವರ ಸಂಖ್ಯೆ ಹೆಚ್ಚಳವಾಗಿತ್ತು. ವರ್ಷಾಂತ್ಯಕ್ಕೆ18,183 ಪ್ರಕರಣಗಳು ವರದಿಯಾಗಿದ್ದವು. ಅದರಲ್ಲಿ 17 ಮಂದಿ ಜ್ವರದ ತೀವ್ರತೆಯಿಂದ ಮೃತಪಟ್ಟಿದ್ದರು.ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಕಾಡುವ ಜ್ವರ, ಈ ವರ್ಷ ಅವಧಿಗೂ ಮುನ್ನವೇ ಸಾವಿರಕ್ಕೂ ಅಧಿಕ ಮಂದಿಯನ್ನು ಅಸ್ವಸ್ಥಗೊಳಿಸಿರುವುದು ಆತಂಕಕ್ಕೆ ಕಾರಣವಾಗಿದೆ.</p>.<p>ಮನೆಯ ಸುತ್ತಮುತ್ತಲಿನ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ಮಳೆ ನೀರಿನಿಂದ ಈಡಿಸ್ ಜಾತಿಯ ಸೊಳ್ಳೆಗಳು ಉತ್ಪತ್ತಿಯಾಗಲಿದ್ದು, ಆ ಸೊಳ್ಳೆಗಳ ಕಡಿತದಿಂದ ಡೆಂಗಿ ಜ್ವರ ಬರುತ್ತದೆ. ಕಳೆದ ನಾಲ್ಕು ವರ್ಷಗಳಲ್ಲಿ 46,958 ಮಂದಿ ಡೆಂಗಿ ಜ್ವರದಿಂದ ಬಳಲಿದ್ದಾರೆ. 39 ಮಂದಿ ಸಾವಿಗೀಡಾಗಿದ್ದಾರೆ. ಈ ಜ್ವರಕ್ಕೆ ಲಸಿಕೆ ಲಭ್ಯ ಇಲ್ಲದ ಪರಿಣಾಮ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು, ವಾಕರಿಕೆ, ವಾಂತಿ ಹಾಗೂ ಆಂತರಿಕ ರಕ್ತಸ್ರಾವ ಡೆಂಗಿ ಜ್ವರದ ಪ್ರಮುಖ ಲಕ್ಷಣವಾಗಿದೆ.</p>.<p>‘ಮುಂಗಾರು ಮಳೆ ಪ್ರಾರಂಭವಾದ ಬಳಿಕ ಡೆಂಗಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈಡಿಸ್ ಎಂಬ ಸೊಳ್ಳೆ ಕಡಿತದಿಂದ ಈ ಜ್ವರ ಒಬ್ಬರಿಂದ ಮತ್ತೊಬ್ಬರಿಗೆ ಬಹುಬೇಗ ಹರಡುತ್ತದೆ. ಹಗಲು ಹೊತ್ತಿನಲ್ಲಿ ಕಚ್ಚುವ ಈ ಸೊಳ್ಳೆ, ಸಂಗ್ರಹಿಸಿಟ್ಟ ನೀರಿನಲ್ಲಿ ಮೊಟ್ಟೆಯಿಟ್ಟು, ಸಂತಾನೋತ್ಪತ್ತಿ ಮಾಡುತ್ತದೆ. ಜನರಲ್ಲಿ ಸ್ವಚ್ಛತೆ ಬಗ್ಗೆ ಇರುವ ಅಸಡ್ಡೆ ಹಾಗೂ ಜಾಗೃತಿ ಕೊರತೆ ರೋಗ ಹೆಚ್ಚಳಕ್ಕೆ ಪ್ರಮುಖ ಕಾರಣ’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>