ತುಮಕೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಇಂದು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಬೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದರು.
ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಂಸದ ಎಸ್.ಪಿ.ಮುದ್ದಹನುಮೇಗೌಡ ಇದ್ದರು.
ಮಠದಿಂದ ಆಸ್ಪತ್ರೆಗೆ
ಸ್ವಾಮೀಜಿ ಭೇಟಿ ಮಾಡಲು ಪ್ರತಿ ದಿನ ಗಣ್ಯರು ಬರುವುದರಿಂದ ಚಿಕಿತ್ಸೆ ನೀಡಲು ಅಡಚಣೆ ಆಗುತ್ತಿರುವುದು, ಸೋಂಕು ತಗಲುವುದನ್ನು ತಡೆಯುವ ಉದ್ದೇಶದಿಂದ ಮಠದಿಂದ ಶಿವಕುಮಾರ ಸ್ವಾಮೀಜಿ ಅವರನ್ನು ನಗರದ ಬಿ.ಎಚ್. ರಸ್ತೆಯ ಸಿದ್ಧಗಂಗಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿತ್ತು.
ಸ್ವಾಮೀಜಿ ಆರೋಗ್ಯವಾಗಿಯೇ ಇದ್ದಾರೆ. ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದರು.