ಸಭಾಪತಿ ಸ್ಥಾನಕ್ಕೆ ಎಸ್.ಆರ್.ಪಾಟೀಲ ಅವರನ್ನು ನೇಮಿಸಲು ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಒಲವು ತೋರಿದ್ದರು. ಆದರೆ, ಮೂಲ ಕಾಂಗ್ರೆಸಿಗರು ಒಗ್ಗಟ್ಟು ಪ್ರದರ್ಶಿಸಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಹುರಿಯಾಳನ್ನಾಗಿ ಮಾಡಿದ್ದರು. ಸಭಾಪತಿ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಹೀಗಾಗಿ, ಉಪಸಭಾಪತಿ ಸ್ಥಾನ ಜೆಡಿಎಸ್ಗೆ ಒಲಿಯಲಿದೆ.