ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಅವಹೇಳನಕಾರಿ ಆಗಿ ಪೋಸ್ಟ್ ಹಾಕಿದ್ದ ಯುವಕನನ್ನು ಜಿಲ್ಲಾ ಅಪರಾಧ ಪತ್ತೆದಳದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಪೊನ್ನತ್ಮೊಟ್ಟೆಯ ನಿವಾಸಿ ನಾಸಿರ್ ಬಂಧಿತ ಆರೋಪಿ.
ಇತ ಮಹಿಳೆಯರ ಬಗ್ಗೆಯೂ ಅವಹೇಳನಕಾರಿ ರೀತಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ. ವಿರಾಜಪೇಟೆಯ ವಿವೇಕ್ ರೈ ಅವರು ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.