ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಳಮಟ್ಟದ ನೌಕರರ ಅನುಕಂಪ ಭತ್ಯೆ ಹೆಚ್ಚಳ

Last Updated 10 ಜನವರಿ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ಕೆಳದರ್ಜೆ ನೌಕರರಾದ ತೋಟಿ, ತಳವಾರ, ನೀರಗಂಟಿ, ವಾಲೀಕಾರ ಸನದಿ ಮತ್ತಿತರರಿಗೆ ಹಾಲಿ ಕೊಡುತ್ತಿರುವ ತಿಂಗಳ ₹800 ಅನುಕಂಪ ಭತ್ಯೆಯನ್ನು ₹1,600ಕ್ಕೆ ಹೆಚ್ಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಒಟ್ಟು 2,869 ಕೆಳದರ್ಜೆ ನೌಕರರಿದ್ದಾರೆ. ಈ ಪೈಕಿ ಬೆಂಗಳೂರು ಕಂದಾಯ ವಿಭಾಗದಲ್ಲಿ 1,925, ಮೈಸೂರು ವಿಭಾಗದಲ್ಲಿ 56, ಬೆಳಗಾವಿ ವಿಭಾಗದಲ್ಲಿ 281 ಮತ್ತು ಕಲಬುರ್ಗಿ ವಿಭಾಗದಲ್ಲಿ 607 ಮಂದಿ ಇದ್ದಾರೆ. ಇವರೆಲ್ಲರಿಗೂ ಈ ಹೆಚ್ಚಳದ ಲಾಭ ಸಿಗಲಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT