<p><strong>ಮಡಿಕೇರಿ:</strong> ನಗರದಲ್ಲಿ ಶನಿವಾರ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ನೇತೃತ್ವದಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ, ಅಯೋಧ್ಯೆ ಸ್ಥಳದಲ್ಲಿಯೇ ರಾಮ ಮಂದಿರ ನಿರ್ಮಿಸಬೇಕೆಂದು ಸಂಕಲ್ಪ ಮಾಡಲಾಯಿತು.ಎಲ್ಲರೂ ಈ ಸಂಕಲ್ಪಕ್ಕೆ ಬೆಂಬಲ ನೀಡಬೇಕು ಎಂದು ಗಣ್ಯರು ಕೋರಿದರು.</p>.<p>ಮಂಗಳೂರಿನ ಗುರುಪುರ ವಜ್ರದೇಹಿಮಠದ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ‘ಸುಗ್ರೀವಾಜ್ಞೆ ತಂದಾದರೂ ಮಂದಿರ ನಿರ್ಮಿಸಬೇಕು.ಬಾಬರ್ ಮನಸ್ಥಿತಿ ತೊಲಗಿಸಿದರೆ ಮಾತ್ರ ಹಿಂದೂ ಸಮಾಜಕ್ಕೆ ಉಳಿಗಾಲ’ ಎಂದು ಎಚ್ಚರಿಸಿದರು.</p>.<p>‘ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂದಿರ ಪರವಾಗಿ ಎಂದೂ ಧ್ವನಿಯೆತ್ತಿಲ್ಲ. ಅದರ ವಿರುದ್ಧವೇ ಕೆಲಸ ಮಾಡುತ್ತಿದ್ದಾರೆ. ಈಗ ಕೇಂದ್ರ ಸರ್ಕಾರದ ವಿರುದ್ಧ ರೈತರನ್ನು ಎತ್ತಿಕಟ್ಟುವ ಕೆಲಸಕ್ಕೆ ಕೈಹಾಕಿದ್ದಾರೆ’ ಎಂದು ದೂರಿದರು.</p>.<p>ಅದಕ್ಕೂ ಮೊದಲು ಬನ್ನಿಮಂಟಪದಿಂದ ಗಾಂಧಿ ಮೈದಾನದ ತನಕ ಬೃಹತ್ ಶೋಭಾಯಾತ್ರೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ನಗರದಲ್ಲಿ ಶನಿವಾರ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ನೇತೃತ್ವದಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ, ಅಯೋಧ್ಯೆ ಸ್ಥಳದಲ್ಲಿಯೇ ರಾಮ ಮಂದಿರ ನಿರ್ಮಿಸಬೇಕೆಂದು ಸಂಕಲ್ಪ ಮಾಡಲಾಯಿತು.ಎಲ್ಲರೂ ಈ ಸಂಕಲ್ಪಕ್ಕೆ ಬೆಂಬಲ ನೀಡಬೇಕು ಎಂದು ಗಣ್ಯರು ಕೋರಿದರು.</p>.<p>ಮಂಗಳೂರಿನ ಗುರುಪುರ ವಜ್ರದೇಹಿಮಠದ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ‘ಸುಗ್ರೀವಾಜ್ಞೆ ತಂದಾದರೂ ಮಂದಿರ ನಿರ್ಮಿಸಬೇಕು.ಬಾಬರ್ ಮನಸ್ಥಿತಿ ತೊಲಗಿಸಿದರೆ ಮಾತ್ರ ಹಿಂದೂ ಸಮಾಜಕ್ಕೆ ಉಳಿಗಾಲ’ ಎಂದು ಎಚ್ಚರಿಸಿದರು.</p>.<p>‘ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂದಿರ ಪರವಾಗಿ ಎಂದೂ ಧ್ವನಿಯೆತ್ತಿಲ್ಲ. ಅದರ ವಿರುದ್ಧವೇ ಕೆಲಸ ಮಾಡುತ್ತಿದ್ದಾರೆ. ಈಗ ಕೇಂದ್ರ ಸರ್ಕಾರದ ವಿರುದ್ಧ ರೈತರನ್ನು ಎತ್ತಿಕಟ್ಟುವ ಕೆಲಸಕ್ಕೆ ಕೈಹಾಕಿದ್ದಾರೆ’ ಎಂದು ದೂರಿದರು.</p>.<p>ಅದಕ್ಕೂ ಮೊದಲು ಬನ್ನಿಮಂಟಪದಿಂದ ಗಾಂಧಿ ಮೈದಾನದ ತನಕ ಬೃಹತ್ ಶೋಭಾಯಾತ್ರೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>