ನಗರದಲ್ಲಿ ಭಾನುವಾರ ಡಿ.ಎಸ್. ನಾಗಭೂಷಣ್ ಅವರ ‘ಗಾಂಧಿ ಕಥನ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಗಾಂಧಿಯನ್ನು ಕೊಂದ ಗೋಡ್ಸೆ ಪ್ರೇತ ವಿದೇಶಕ್ಕೆ ಭೇಟಿ ಕೊಟ್ಟಿತು ಎಂದುಕೊಳ್ಳೋಣ. ತಾನು ಎಲ್ಲಿಂದ ಬಂದೆ ಎಂದು ಹೇಳಬೇಕಾಗಿ ಬಂದರೆ, ತಾನು ಬುದ್ಧನ ನಾಡಿನಿಂದಲೋ, ಗಾಂಧಿ ಅಥವಾ ಅಂಬೇಡ್ಕರ್ ನಾಡಿನಿಂದ ಬಂದೆ ಎಂತಲೋ ಹೇಳಿಕೊಳ್ಳಬೇಕು. ಹೀಗೆ ಹೇಳಿಕೊಳ್ಳದೆ ಬೇರೆ ದಾರಿಯೇ ಇಲ್ಲ’ ಎಂದರು.