ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ, ಡಿ.ಸಿ. ತಮ್ಮಣ್ಣ ಕುಟುಂಬದವರು ಜಮೀನು ಒತ್ತುವರಿ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಸ್ಥಳ ವೀಕ್ಷಣೆಗೆ ಹೋದ ನಮ್ಮ ಮೇಲೆ ಕುಮಾರಸ್ವಾಮಿ ಬೆಂಬಲಿತ ಗೂಂಡಾಗಳು ಹಲ್ಲೆಗೆ ಯತ್ನಿಸಿ, ಮೊಟ್ಟೆ ಎಸೆದಿದ್ದಾರೆ. ಪೊಲೀಸರು ತಮ್ಮ ಕಣ್ಣ ಮುಂದೆ ಈ ಕೃತ್ಯ ನಡೆದಿದ್ದರೂ ಕ್ರಮ ಕೈಗೊಳ್ಳಲಿಲ್ಲ. ಈ ಬಗ್ಗೆ ಎಸ್ಪಿಗೆ ದೂರು ಸಲ್ಲಿಸಿದ್ದೇವೆ ಎಂದರು.