ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ಮುಖ್ಯಸ್ಥರಾಗಿ ಪ್ರವೀಣ್ ಸೂದ್

Last Updated 31 ಜನವರಿ 2020, 20:15 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕಿಯಾಗಿದ್ದ (ಡಿಜಿ) ನೀಲಮಣಿ ಎನ್ ರಾಜು ನಿವೃತ್ತರಾಗಿದ್ದು, ಅವರ ಸ್ಥಾನಕ್ಕೆ ಸಿಐಡಿ ವಿಭಾಗದ ಡಿಜಿಪಿ ಆಗಿದ್ದ ಪ್ರವೀಣ್ ಸೂದ್ ಅವರನ್ನು ರಾಜ್ಯ ಸರ್ಕಾರ ಶುಕ್ರವಾರ ನೇಮಕ ಮಾಡಿದೆ.

ಡಿಜಿ ನೇಮಕದಲ್ಲಿ ಅಧಿಕಾರಿಗಳ ಸೇವಾ ಹಿರಿತನ ಕಡೆಗಣಿಸಿ ಸೂದ್‌ ಅವರಿಗೆ ಈ ಹುದ್ದೆ ನೀಡಲಾಗಿದೆ ಎಂಬ ಟೀಕೆ ವ್ಯಕ್ತವಾಗಿದೆ.

ನೇಮಕಾತಿ ಆದೇಶ ಹೊರಬೀಳುತ್ತಿದ್ದಂತೆ ಪೊಲೀಸ್ ಪ್ರಧಾನ ಕಚೇರಿಗೆ ಬಂದ ಸೂದ್, ನೀಲಮಣಿ ರಾಜು ಅವರಿಂದ ಬ್ಯಾಟನ್ ಪಡೆಯುವ ಮೂಲಕ ಅಧಿಕಾರ ವಹಿಸಿಕೊಂಡರು.

ಸೇವಾ ಹಿರಿತನದಲ್ಲಿ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎ.ಎಂ.ಪ್ರಸಾದ್ ಮೊದಲಿಗರು. ಸೂದ್‌ ಎರಡನೇ ಸ್ಥಾನದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT