ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ವಯಂಪ್ರೇರಿತ ಪ್ರಕರಣ ಬೇಡ’

Last Updated 13 ಅಕ್ಟೋಬರ್ 2018, 20:15 IST
ಅಕ್ಷರ ಗಾತ್ರ

ಬೆಂಗಳೂರು: ಸಾಲ ಮರುಪಾವತಿಗಾಗಿ ಆರ್ಥಿಕ ದುರ್ಬಲ ವರ್ಗದವರ ಮೇಲೆ ದೌರ್ಜನ್ಯ ನಡೆಸುವ ಲೇವಾದೇವಿಗಾರರು, ಖಾಸಗಿ ಹಣಕಾಸು ಸಂಸ್ಥೆಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವ ನಿರ್ಧಾರವನ್ನು ಡಿಜಿಪಿ ನೀಲಮಣಿ ರಾಜು ಹಿಂಪಡೆದಿದ್ದಾರೆ.

ಸೆ.3ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ, ‘ಸಣ್ಣ ರೈತರು, ಭೂರಹಿತ ಕೃಷಿ ಕಾರ್ಮಿಕರು ಹಾಗೂ ಅಶಕ್ತ ವರ್ಗದವರ ಋಣಭಾರ ಸಮಸ್ಯೆಗಳ ಪರಿಹಾರಕ್ಕಾಗಿ ‘ಕರ್ನಾಟಕ ಋಣಮುಕ್ತ ಮಸೂದೆ-2018’ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಮಸೂದೆ ಜಾರಿಗೂ ಮುನ್ನ ಸಾಲ ಮರಳಿಸುವಂತೆ ಒತ್ತಡ ಹೇರುವ ಲೇವಾದೇವಿಗಾರರು, ಹಣಕಾಸು ಸಂಸ್ಥೆಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮ ತೆಗೆದುಕೊಳ್ಳಿ’ ಎಂದು ಡಿಜಿಪಿ ಪೊಲೀಸರಿಗೆ ಸೂಚನೆ ಕೊಟ್ಟಿದ್ದರು.

ಅ.3ರಂದು ಇನ್ನೊಂದು ಸುತ್ತೋಲೆ ಹೊರಡಿಸಿ, ‘ಸಾಲ ಮರುಪಾವತಿಗಾಗಿ ರೈತರು ಹಾಗೂ ಸಾರ್ವಜನಿಕರಿಗೆ ಶೋಷಣೆ ನೀಡಲಾಗುತ್ತಿದೆ ಎಂದು ಸಹಕಾರ ಇಲಾಖೆಯ ನೋಂದಣಾಧಿಕಾರಿ/ಉಪ ನೋಂದಣಾಧಿಕಾರಿ ದೂರು ಕೊಟ್ಟರೆ ಮಾತ್ರ ಎಫ್‌ಐಆರ್ ಮಾಡಬೇಕು. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬಾರದು’ ಎಂದು ಹೇಳಿದ್ದಾರೆ. ನಿರ್ಧಾರ ಹಿಂಪಡೆದಿರುವುದಕ್ಕೆ ಡಿಜಿಪಿ ಸೂಕ್ತ ಕಾರಣ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT