ಅಧ್ಯಕ್ಷೆ ಚೈತ್ರಾ ಶಿರೂರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ದಿನದಿಂದ ನಾಪತ್ತೆಯಾಗಿದ್ದ ಬಿಜೆಪಿ ಸದಸ್ಯರಾದ ಗುಡಗೇರಿ ಕ್ಷೇತ್ರದ ಜ್ಯೋತಿ ಬೆಂತೂರು, ಗಳಗಿ ಕ್ಷೇತ್ರದ ಮಂಜವ್ವ ಹರಿಜನ, ತಬಕದ ಹೊನ್ನಳ್ಳಿ ಕ್ಷೇತ್ರದ ಅಣ್ಣಪ್ಪ ದೇಸಾಯಿ ಹಾಗೂ ಗರಗ ಕ್ಷೇತ್ರದ ರತ್ನಾ ಪಾಟೀಲ ಅವರು ಮಂಗಳವಾರ ನಡೆದ ಸಭೆಗೆ ಪೊಲೀಸ್ ಬೆಂಗಾವಲಿನಲ್ಲಿ ಬಂದರು.