<p><strong>ಬೆಂಗಳೂರು:</strong> ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು, ಹಾವೇರಿ ಜಿಲ್ಲಾ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.</p>.<p>ನಗರದ ಸಿಬಿಐ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆಯಿಂದ ವಿಚಾರಣೆ ನಡೆಯುತ್ತಿದೆ. ಪ್ರಕರಣ ಸಂಬಂಧ ಎಂಟು ಮಂದಿ ಆರೋಪಿಗಳ ವಿರುದ್ಧ ಇತ್ತೀಗಷ್ಟೇ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಸಿಬಿಐ, ತನಿಖೆಯಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವುದಾಗಿ ನ್ಯಾಯಾಲಯಕ್ಕೆ ಹೇಳಿತ್ತು. ಅದರಂತೆ ಇದೀಗ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದೆ.</p>.<p>ಹತ್ಯೆ ನಡೆದ ಅವಧಿಯಲ್ಲಿ ಬಾಲದಂಡಿ ಅವರು ಹುಬ್ಬಳ್ಳಿ- ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ (ಅಪರಾಧ) ಆಗಿ ಕೆಲಸ ಮಾಡುತ್ತಿದ್ದರು. ಅದೇ ಕಾರಣಕ್ಕೆ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಬರುವಂತೆ ಬಾಲದಂಡಿಗೆ ನೋಟಿಸ್ ನೀಡಿದ್ದರು. ಅದರನ್ವಯ ಬಾಲದಂಡಿ ವಿಚಾರಣೆಗೆ ಬಂದಿದ್ದಾರೆ.</p>.<p>ಮತ್ತಷ್ಟು ಪೊಲೀಸರು ಹಾಗೂ ಧಾರವಾಡದ ಸ್ಥಳೀಯ ವ್ಯಕ್ತಿಗಳಿಗೂ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿರುವ ಮಾಹಿತಿ ಇದ್ದು, ಅವರ ವಿಚಾರಣೆಯೂ ಕ್ರಮವಾಗಿ ನಡೆಯಲಿದೆ.</p>.<p><strong>ಅಮಾಯಕರ ಬಂಧನ:</strong> ಹತ್ಯೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆಯೆಂದು ಹೇಳಿದ್ದ ಸಿಬಿಐ, ನೈಜ ಆರೋಪಿಗಳು ಎನ್ನಲಾದ 8 ಮಂದಿಯನ್ನು ಈಗಾಗಲೇ ಬಂಧಿಸಿದೆ. ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಿದ್ದು ಏಕೆ? ಯಾರಾದರೂ ಒತ್ತಡ ಹಾಕಿದರಾ? ಹತ್ಯೆ ಹಿಂದೆ ರಾಜಕಾರಣಿಗಳ ಕೈವಾಡ ಇದೆಯಾ? ಎಂಬ ಹಲವು ಪ್ರಶ್ನೆಗಳಿಗೆ ಸಿಬಿಐ ಉತ್ತರ ಪಡೆಯುತ್ತಿದೆ.</p>.<p>ಹತ್ಯೆಯಲ್ಲಿ ಪೊಲೀಸರು ಹಾಗೂ ಸ್ಥಳೀಯ ರಾಜಕಾರಣಿಗಳ ಪಾತ್ರವೂ ಇರುವ ಅನುಮಾನ ಸಿಬಿಐ ಅಧಿಕಾರಿಗಳಿಗೆ ಇದೆ. ಅದೇ ಅಯಾಮದಲ್ಲೂ ತನಿಖೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು, ಹಾವೇರಿ ಜಿಲ್ಲಾ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.</p>.<p>ನಗರದ ಸಿಬಿಐ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆಯಿಂದ ವಿಚಾರಣೆ ನಡೆಯುತ್ತಿದೆ. ಪ್ರಕರಣ ಸಂಬಂಧ ಎಂಟು ಮಂದಿ ಆರೋಪಿಗಳ ವಿರುದ್ಧ ಇತ್ತೀಗಷ್ಟೇ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಸಿಬಿಐ, ತನಿಖೆಯಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವುದಾಗಿ ನ್ಯಾಯಾಲಯಕ್ಕೆ ಹೇಳಿತ್ತು. ಅದರಂತೆ ಇದೀಗ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದೆ.</p>.<p>ಹತ್ಯೆ ನಡೆದ ಅವಧಿಯಲ್ಲಿ ಬಾಲದಂಡಿ ಅವರು ಹುಬ್ಬಳ್ಳಿ- ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ (ಅಪರಾಧ) ಆಗಿ ಕೆಲಸ ಮಾಡುತ್ತಿದ್ದರು. ಅದೇ ಕಾರಣಕ್ಕೆ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಬರುವಂತೆ ಬಾಲದಂಡಿಗೆ ನೋಟಿಸ್ ನೀಡಿದ್ದರು. ಅದರನ್ವಯ ಬಾಲದಂಡಿ ವಿಚಾರಣೆಗೆ ಬಂದಿದ್ದಾರೆ.</p>.<p>ಮತ್ತಷ್ಟು ಪೊಲೀಸರು ಹಾಗೂ ಧಾರವಾಡದ ಸ್ಥಳೀಯ ವ್ಯಕ್ತಿಗಳಿಗೂ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿರುವ ಮಾಹಿತಿ ಇದ್ದು, ಅವರ ವಿಚಾರಣೆಯೂ ಕ್ರಮವಾಗಿ ನಡೆಯಲಿದೆ.</p>.<p><strong>ಅಮಾಯಕರ ಬಂಧನ:</strong> ಹತ್ಯೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆಯೆಂದು ಹೇಳಿದ್ದ ಸಿಬಿಐ, ನೈಜ ಆರೋಪಿಗಳು ಎನ್ನಲಾದ 8 ಮಂದಿಯನ್ನು ಈಗಾಗಲೇ ಬಂಧಿಸಿದೆ. ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಿದ್ದು ಏಕೆ? ಯಾರಾದರೂ ಒತ್ತಡ ಹಾಕಿದರಾ? ಹತ್ಯೆ ಹಿಂದೆ ರಾಜಕಾರಣಿಗಳ ಕೈವಾಡ ಇದೆಯಾ? ಎಂಬ ಹಲವು ಪ್ರಶ್ನೆಗಳಿಗೆ ಸಿಬಿಐ ಉತ್ತರ ಪಡೆಯುತ್ತಿದೆ.</p>.<p>ಹತ್ಯೆಯಲ್ಲಿ ಪೊಲೀಸರು ಹಾಗೂ ಸ್ಥಳೀಯ ರಾಜಕಾರಣಿಗಳ ಪಾತ್ರವೂ ಇರುವ ಅನುಮಾನ ಸಿಬಿಐ ಅಧಿಕಾರಿಗಳಿಗೆ ಇದೆ. ಅದೇ ಅಯಾಮದಲ್ಲೂ ತನಿಖೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>