<p><strong>ಉಜಿರೆ:</strong> ಧರ್ಮಸ್ಥಳ ಸಮೀಪದ ಕನ್ಯಾಡಿಯ ರಾಮಕ್ಷೇತ್ರದಲ್ಲಿ ಸೋಮವಾರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಧರ್ಮ ಸಂಸತ್ ನಡೆಯಲಿದ್ದು, ದೇಶಾದ್ಯಂತದ 2 ಸಾವಿರಕ್ಕೂ ಅಧಿಕ ಸಾಧು, ಸಂತರು ಪಾಲ್ಗೊಳ್ಳಲಿದ್ದಾರೆ.</p>.<p>ಪ್ರತಿ ಹಳ್ಳಿಯಲ್ಲಿ ಗುರುಕುಲ ಮಾದರಿಯ ಅಂಗನವಾಡಿ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಸನಾತನ ಧರ್ಮವನ್ನು ಉಳಿಸುವ ಪ್ರಯತ್ನ ನಡೆಯಬೇಕು ಎಂಬ ಮುಖ್ಯ ಧ್ಯೇಯವನ್ನಿಟ್ಟುಕೊಂಡು ಈ ಧರ್ಮ ಸಂಸತ್ ನಡೆಯುತ್ತಿದೆ.</p>.<p>ಸೋಮವಾರ ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಧರ್ಮ ಸಂಸತ್ ಉದ್ಘಾಟಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು.</p>.<p>ಪ್ರಧಾನ ವೇದಿಕೆಯಾದ ಶ್ರೀ ಆತ್ಮಾನಂದ ಸರಸ್ವತಿ ವೇದಿಕೆಯಲ್ಲಿ ಧರ್ಮ ಸಂಸದ್ ನಡೆಯಲಿದೆ. 15 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.</p>.<p>ರಾಮಕ್ಷೇತ್ರವನ್ನು ಸುಂದರವಾಗಿ ಅಲಂಕರಿಸಲಾಗಿದೆ. ಪಾಕಶಾಲೆ, ಭೋಜನ ಶಾಲೆ ಸಿದ್ಧಗೊಂಡಿದೆ. ಭಾನುವಾರ ಸಂಜೆ 4 ಗಂಟೆಗೆ ಉಜಿರೆಯಿಂದ ಸಾಧು-ಸಂತರ ಶೋಭಾಯಾತ್ರೆ ನಡೆಯಲಿದೆ.</p>.<p>ಧರ್ಮ ಸಂಸತ್ ಜತೆಯಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಪಟ್ಟಾಭಿಷೇಕದ ದಶಮಾನೋತ್ಸವವೂ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ಧರ್ಮಸ್ಥಳ ಸಮೀಪದ ಕನ್ಯಾಡಿಯ ರಾಮಕ್ಷೇತ್ರದಲ್ಲಿ ಸೋಮವಾರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಧರ್ಮ ಸಂಸತ್ ನಡೆಯಲಿದ್ದು, ದೇಶಾದ್ಯಂತದ 2 ಸಾವಿರಕ್ಕೂ ಅಧಿಕ ಸಾಧು, ಸಂತರು ಪಾಲ್ಗೊಳ್ಳಲಿದ್ದಾರೆ.</p>.<p>ಪ್ರತಿ ಹಳ್ಳಿಯಲ್ಲಿ ಗುರುಕುಲ ಮಾದರಿಯ ಅಂಗನವಾಡಿ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಸನಾತನ ಧರ್ಮವನ್ನು ಉಳಿಸುವ ಪ್ರಯತ್ನ ನಡೆಯಬೇಕು ಎಂಬ ಮುಖ್ಯ ಧ್ಯೇಯವನ್ನಿಟ್ಟುಕೊಂಡು ಈ ಧರ್ಮ ಸಂಸತ್ ನಡೆಯುತ್ತಿದೆ.</p>.<p>ಸೋಮವಾರ ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಧರ್ಮ ಸಂಸತ್ ಉದ್ಘಾಟಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು.</p>.<p>ಪ್ರಧಾನ ವೇದಿಕೆಯಾದ ಶ್ರೀ ಆತ್ಮಾನಂದ ಸರಸ್ವತಿ ವೇದಿಕೆಯಲ್ಲಿ ಧರ್ಮ ಸಂಸದ್ ನಡೆಯಲಿದೆ. 15 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.</p>.<p>ರಾಮಕ್ಷೇತ್ರವನ್ನು ಸುಂದರವಾಗಿ ಅಲಂಕರಿಸಲಾಗಿದೆ. ಪಾಕಶಾಲೆ, ಭೋಜನ ಶಾಲೆ ಸಿದ್ಧಗೊಂಡಿದೆ. ಭಾನುವಾರ ಸಂಜೆ 4 ಗಂಟೆಗೆ ಉಜಿರೆಯಿಂದ ಸಾಧು-ಸಂತರ ಶೋಭಾಯಾತ್ರೆ ನಡೆಯಲಿದೆ.</p>.<p>ಧರ್ಮ ಸಂಸತ್ ಜತೆಯಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಪಟ್ಟಾಭಿಷೇಕದ ದಶಮಾನೋತ್ಸವವೂ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>