ನೀರಿನ ಕೊರತೆಯಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಬರುವ ಯಾತ್ರಿಕರಿಗೆ ತೀವ್ರ ಸಮಸ್ಯೆಯಾಗಿದೆ. ಹೀಗಾಗಿ, ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಹೆಗ್ಗಡೆ
ಯವರ ಜೊತೆ ಸೋಮವಾರ ಚರ್ಚೆ ನಡೆಸಿದರು. ಮುಖ್ಯ ಕಾರ್ದರ್ಶಿಯವರ ಸೂಚನೆಯಂತೆ ಅಧಿಕಾರಿಗಳ ತಂಡದ ಜೊತೆ ಧರ್ಮಸ್ಥಳಕ್ಕೆ ತೆರಳಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆರ್. ಸೆಲ್ವಮಣಿ ಸ್ಥಳ ಪರಿಶೀಲನೆ ನಡೆಸಿದರು.‘ನೆರಿಯಾ ಹೊಳೆಗೆ ಚೆಕ್ಡ್ಯಾಂ ನಿರ್ಮಿಸುವ ಕುರಿತಂತೆ ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಸೆಲ್ವಮಣಿ ತಿಳಿಸಿದರು.