<p><strong>ಧಾರವಾಡ:</strong> ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ (ಐಸಿಎಆರ್) ಕೃಷಿ ಶಿಕ್ಷಣ ವಿಭಾಗವು ಘೋಷಿಸಿರುವ ಅತ್ಯುತ್ತಮ ಕೃಷಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ.</p>.<p>91ನೇ ಐಸಿಎಆರ್ ಸಂಸ್ಥಾಪನಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಹಾಗು ಕೇಂದ್ರ ಕೃಷಿ ವಿಶ್ವವಿದ್ಯಾಲಯಗಳು ಮತ್ತು ಐಸಿಎಆರ್ ಡೀಮ್ಡ್–ಟು–ಬಿ ವಿಶ್ವವಿದ್ಯಾಲಯಗಳ ಶ್ರೇಯಾಂಕವನ್ನು ಪ್ರಕಟಿಸಲಾಯಿತು.</p>.<p>‘ರಾಜ್ಯದ ಆರು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಧಾರವಾಡ ವಿಶ್ವವಿದ್ಯಾಲಯ ಮೊದಲನೇ ಸ್ಥಾನ ಪಡೆದರೆ, ರಾಷ್ಟ್ರ ಮಟ್ಟದಲ್ಲಿ 16ನೇ ಸ್ಥಾನ ಪಡೆದಿದೆ. ವಿಶ್ವವಿದ್ಯಾಲಯದಬೀಜೋತ್ಪಾದನೆ, ಮಣ್ಣಿನ ವಿಶ್ಲೇಷಣೆ, ಆದಾಯ ಉತ್ಪಾದನೆ, ಅಂತರ–ಸಾಂಸ್ಥಿಕ ಸಹಕಾರಿ ಯೋಜನೆಗಳು, ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ, ಬೋಧನಾ ಫಲಿತಾಂಶ, ಸಂಶೋಧನೆ, ವಿಸ್ತರಣಾ ಕ್ಷೇತ್ರದಲ್ಲಿನ ಸಾಧನೆಗಳನ್ನು ಪರಿಶೀಲಿಸಲಾಗಿದೆ’ ಎಂದುಕುಲಪತಿ ಡಾ. ಎಂ.ಬಿ.ಚೆಟ್ಟಿ ತಿಳಿಸಿದ್ದಾರೆ.</p>.<p>‘ಈ ಸಾಧನೆಗೆ ವಿಶ್ವವಿದ್ಯಾಲಯದ ಸಮಸ್ತ ಸಿಬ್ಬಂದಿಯ ಪರಿಶ್ರಮವೇ ಕಾರಣ. ಇಲ್ಲಿ ಅಭಿವೃದ್ಧಿಪಡಿಸುತ್ತಿರುವ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು, ಸ್ಪಂದಿಸುತ್ತಿರುವ ಕೃಷಿ ಸಮುದಾಯದ ಪಾಲೂ ಈ ಯಶಸ್ಸಿನಲ್ಲಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ (ಐಸಿಎಆರ್) ಕೃಷಿ ಶಿಕ್ಷಣ ವಿಭಾಗವು ಘೋಷಿಸಿರುವ ಅತ್ಯುತ್ತಮ ಕೃಷಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ.</p>.<p>91ನೇ ಐಸಿಎಆರ್ ಸಂಸ್ಥಾಪನಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಹಾಗು ಕೇಂದ್ರ ಕೃಷಿ ವಿಶ್ವವಿದ್ಯಾಲಯಗಳು ಮತ್ತು ಐಸಿಎಆರ್ ಡೀಮ್ಡ್–ಟು–ಬಿ ವಿಶ್ವವಿದ್ಯಾಲಯಗಳ ಶ್ರೇಯಾಂಕವನ್ನು ಪ್ರಕಟಿಸಲಾಯಿತು.</p>.<p>‘ರಾಜ್ಯದ ಆರು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಧಾರವಾಡ ವಿಶ್ವವಿದ್ಯಾಲಯ ಮೊದಲನೇ ಸ್ಥಾನ ಪಡೆದರೆ, ರಾಷ್ಟ್ರ ಮಟ್ಟದಲ್ಲಿ 16ನೇ ಸ್ಥಾನ ಪಡೆದಿದೆ. ವಿಶ್ವವಿದ್ಯಾಲಯದಬೀಜೋತ್ಪಾದನೆ, ಮಣ್ಣಿನ ವಿಶ್ಲೇಷಣೆ, ಆದಾಯ ಉತ್ಪಾದನೆ, ಅಂತರ–ಸಾಂಸ್ಥಿಕ ಸಹಕಾರಿ ಯೋಜನೆಗಳು, ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ, ಬೋಧನಾ ಫಲಿತಾಂಶ, ಸಂಶೋಧನೆ, ವಿಸ್ತರಣಾ ಕ್ಷೇತ್ರದಲ್ಲಿನ ಸಾಧನೆಗಳನ್ನು ಪರಿಶೀಲಿಸಲಾಗಿದೆ’ ಎಂದುಕುಲಪತಿ ಡಾ. ಎಂ.ಬಿ.ಚೆಟ್ಟಿ ತಿಳಿಸಿದ್ದಾರೆ.</p>.<p>‘ಈ ಸಾಧನೆಗೆ ವಿಶ್ವವಿದ್ಯಾಲಯದ ಸಮಸ್ತ ಸಿಬ್ಬಂದಿಯ ಪರಿಶ್ರಮವೇ ಕಾರಣ. ಇಲ್ಲಿ ಅಭಿವೃದ್ಧಿಪಡಿಸುತ್ತಿರುವ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು, ಸ್ಪಂದಿಸುತ್ತಿರುವ ಕೃಷಿ ಸಮುದಾಯದ ಪಾಲೂ ಈ ಯಶಸ್ಸಿನಲ್ಲಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>