ಹುಬ್ಬಳ್ಳಿ: ಧಾರವಾಡ ವಿಶ್ವವಿದ್ಯಾಲಯಕ್ಕೆ ಕನಕದಾಸರ ಹೆಸರನ್ನು ನಾಮಕರಣ ಮಾಡಬೇಕು ಎಂದು ಮನಸೂರು ಶ್ರೀ ರೇವಣಸಿದ್ದೇಶ್ವರ ಮಹಾಮಠದ ಬಸವರಾಜ ದೇವರು ಆಗ್ರಹಿಸಿದರು.
ಹಾಲುಮತ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಉಡುಪಿ ಕೃಷ್ಣ ಮಠದ ಗರ್ಭಗುಡಿಯಲ್ಲಿ ಕನಕನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು ಎಂದು ಅಷ್ಠಮಠಾಧೀಶರನ್ನು ಒತ್ತಾಯಿಸಿದರು. ಅಷ್ಠಮಠಗಳ ಜೊತೆಗೆ ಒಂಬತ್ತನೇ ಮಠವಾಗಿ ಕುರುಬರ ಮಠ ಹಾಗೂ ಹತ್ತನೇ ಮಠವಾಗಿ ಗೊಲ್ಲರ ಮಠವನ್ನು ಉಡುಪಿಯಲ್ಲಿ ಸ್ಥಾಪಿಸಬೇಕು ಎಂದು ಅವರು ಒತ್ತಾಯಿಸಿದರು.