ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನನಗೀಗ ಜನರ ಉಪಕಾರ ಸ್ಮರಣೆಯೊಂದೇ ಮುಖ್ಯ. ರಾಜಕಾರಣದ ಬಗ್ಗೆ ಆಲೋಚನೆಯನ್ನೇ ಮಾಡಿಲ್ಲ. ನನ್ನ ಬಂಧನವನ್ನು ವಿರೋಧಿಸಿ ಪ್ರತಿಭಟಿಸಿದವರ ಋಣ ತೀರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತಿದ್ದೇನೆ. ಬೆನ್ನು ನೋವು ಹೆಚ್ಚಿದ್ದು, ಸರಿಯಾಗಿ ಕುಳಿತುಕೊಳ್ಳಲೂ ಆಗುತ್ತಿಲ್ಲ. ಮೊದಲು ಅದಕ್ಕೆ ಚಿಕಿತ್ಸೆ ಪಡೆಯುವೆ’ ಎಂದು ಅವರು ಹೇಳಿದರು.