ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ನಾಯಕತ್ವದ ವಿರುದ್ಧ ಮಾತನಾಡಿ, ಯಾರು ಪಕ್ಷ ಬಿಟ್ಟು ಹೋಗಿದ್ದಾರೋ ಅವರು ಈಗ ವೆಂಟಿಲೇಟರ್ನಲ್ಲಿದ್ದಾರೆ. ಪಕ್ಷ ಹಾಗೂ ಪಕ್ಷದ ಮುಖಂಡರ ವಿರುದ್ಧ ಯಾರಾದರೂ ಬಹಿರಂಗವಾಗಿ ಹೇಳಿಕೆ ಕೊಟ್ಟರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.