<p><strong>ಬೆಂಗಳೂರು:</strong> ಮಧ್ಯಪ್ರದೇಶದಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿರುವ ಕಾಂಗ್ರೆಸ್, ಬೆಂಗಳೂರಿನಲ್ಲಿರುವ ಬಂಡಾಯ ಶಾಸಕರ ಸಂಪರ್ಕಕ್ಕೆ ಹರಸಾಹಸ ಮಾಡುತ್ತಿದ್ದು, ಬುಧವಾರ ಮುಂಜಾನೆ ಯಲಹಂಕದ ರಮಡ ಹೊಟೇಲ್ಗೆ ನುಗ್ಗಲು ಯತ್ನಿಸಿದ ದಿಗ್ವಿಜಯ್ ಸಿಂಗ್ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಬಂಧಿಸಿ, ಆನಂತರ ಬಿಡುಗಡೆ ಮಾಡಿದರು.</p>.<p>ಮುಖ್ಯಮಂತ್ರಿ ಕಮಲ್ನಾಥ್ ವಿರುದ್ಧ ತಿರುಗಿ ಬಿದ್ದಿರುವ 22 ಶಾಸಕರು ಕಾಂಗ್ರೆಸ್ ತ್ಯಜಿಸಿ, ಯುವ ನಾಯಕ ಜ್ಯೋತಿರಾದಿತ್ಯ ಸಿಂದಿಯಾ ಅವರನ್ನು ಬೆಂಬಲಿಸಿ ಬಿಜೆಪಿಗೆ ಸೇರಲು ಸಿದ್ಧತೆ ನಡೆಸಿದ್ದಾರೆ.</p>.<p>ಈ ಮಧ್ಯೆ, ಬೆಳಿಗ್ಗೆ 5.30ರ ಸುಮಾರಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ದಿಗ್ವಿಜಯ್ ಸಿಂಗ್ ಹಾಗೂ ಮಧ್ಯಪ್ರದೇಶ ಸರ್ಕಾರದ ಕೆಲವು ಸಚಿವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜತೆಗೂಡಿ ನೇರವಾಗಿ ಬಂಡಾಯ ಶಾಸಕರು ತಂಗಿರುವ ರಮಡ ಹೊಟೇಲ್ಗೆ ತೆರಳಿದರು. ಆದರೆ, ದಾರಿಯಲ್ಲೇ ಪೊಲೀಸರು ತಡೆದರು. ಈ ಹಂತದಲ್ಲಿ ಭಾರಿ ನೂಕುನುಗ್ಗಲು ಉಂಟಾಯಿತು.</p>.<p>ನೂರಾರು ಸಂಖ್ಯೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ಕೆಲಹೊತ್ತು ಗೊಂದಲ ಉಂಟಾಯಿತು.</p>.<p>ಪೊಲೀಸರ ಕ್ರಮ ವಿರೋಧಿಸಿ ದಿಗ್ವಿಜಯ್ ಸಿಂಗ್ ತಮ್ಮ ಬೆಂಬಲಿಗರ ಜತೆ ಪ್ರತಿಭಟನೆ ಆರಂಭಿಸಿದರು. ರಸ್ತೆ ಮೇಲೆ ಕುಳಿತ ಅವರನ್ನು ಪೊಲೀಸರು ಬಲವಂತವಾಗಿ ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.</p>.<p>ಯಲಹಂಕದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಿಗ್ವಿಜಯ್ ಸಿಂಗ್ ಅವರನ್ನು ಕೆಲಹೊತ್ತು ಕೂರಿಸಲಾಗಿತ್ತು. ಈ ಸಂದರ್ಭದಲ್ಲಿ ಶಿವಕುಮಾರ್ ಅವರಲ್ಲದೆ, ಕೃಷ್ಣ ಬೈರೇಗೌಡ, ರಿಜ್ಷಾನ್ ಅರ್ಷದ್, ಎನ್.ಎ. ಹ್ಯಾರಿಸ್ ಮತ್ತಿತರರು ಇದ್ದರು.</p>.<p>ಇತ್ತೀಚೆಗೆ ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಜೀತೂ ಪಟವಾರಿ ತಮ್ಮ ಶಾಸಕರನ್ನು ಭೇಟಿಯಾಗಲು ಬಂದಿದ್ದಾಗಲೂ ಪೊಲೀಸರ ಜತೆ ಜಟಾಪಟಿ ನಡೆಸಿದ್ದರು.ಾನಂತರ ಅವರನ್ನೂ ಬಂಧಿಸಿ, ಬಿಡುಗಡೆ ಮಾಡಲಾಗಿತ್ತು.</p>.<p>‘ಕೆಲವು ಸ್ಥಳೀಯ ಬಿಜೆಪಿ ನಾಯಕರ ಭದ್ರತೆಯಲ್ಲಿರುವ ತಮ್ಮ ಮಗನನ್ನು ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಬಂಡಾಯ ಶಾಸಕ ಚೌಧರಿ ಅವರ ತಂದೆ ನಾರಾಯಣ ಚೌಧರಿ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾ ನಿರೀಕ್ಷಕ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಧ್ಯಪ್ರದೇಶದಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿರುವ ಕಾಂಗ್ರೆಸ್, ಬೆಂಗಳೂರಿನಲ್ಲಿರುವ ಬಂಡಾಯ ಶಾಸಕರ ಸಂಪರ್ಕಕ್ಕೆ ಹರಸಾಹಸ ಮಾಡುತ್ತಿದ್ದು, ಬುಧವಾರ ಮುಂಜಾನೆ ಯಲಹಂಕದ ರಮಡ ಹೊಟೇಲ್ಗೆ ನುಗ್ಗಲು ಯತ್ನಿಸಿದ ದಿಗ್ವಿಜಯ್ ಸಿಂಗ್ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಬಂಧಿಸಿ, ಆನಂತರ ಬಿಡುಗಡೆ ಮಾಡಿದರು.</p>.<p>ಮುಖ್ಯಮಂತ್ರಿ ಕಮಲ್ನಾಥ್ ವಿರುದ್ಧ ತಿರುಗಿ ಬಿದ್ದಿರುವ 22 ಶಾಸಕರು ಕಾಂಗ್ರೆಸ್ ತ್ಯಜಿಸಿ, ಯುವ ನಾಯಕ ಜ್ಯೋತಿರಾದಿತ್ಯ ಸಿಂದಿಯಾ ಅವರನ್ನು ಬೆಂಬಲಿಸಿ ಬಿಜೆಪಿಗೆ ಸೇರಲು ಸಿದ್ಧತೆ ನಡೆಸಿದ್ದಾರೆ.</p>.<p>ಈ ಮಧ್ಯೆ, ಬೆಳಿಗ್ಗೆ 5.30ರ ಸುಮಾರಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ದಿಗ್ವಿಜಯ್ ಸಿಂಗ್ ಹಾಗೂ ಮಧ್ಯಪ್ರದೇಶ ಸರ್ಕಾರದ ಕೆಲವು ಸಚಿವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜತೆಗೂಡಿ ನೇರವಾಗಿ ಬಂಡಾಯ ಶಾಸಕರು ತಂಗಿರುವ ರಮಡ ಹೊಟೇಲ್ಗೆ ತೆರಳಿದರು. ಆದರೆ, ದಾರಿಯಲ್ಲೇ ಪೊಲೀಸರು ತಡೆದರು. ಈ ಹಂತದಲ್ಲಿ ಭಾರಿ ನೂಕುನುಗ್ಗಲು ಉಂಟಾಯಿತು.</p>.<p>ನೂರಾರು ಸಂಖ್ಯೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ಕೆಲಹೊತ್ತು ಗೊಂದಲ ಉಂಟಾಯಿತು.</p>.<p>ಪೊಲೀಸರ ಕ್ರಮ ವಿರೋಧಿಸಿ ದಿಗ್ವಿಜಯ್ ಸಿಂಗ್ ತಮ್ಮ ಬೆಂಬಲಿಗರ ಜತೆ ಪ್ರತಿಭಟನೆ ಆರಂಭಿಸಿದರು. ರಸ್ತೆ ಮೇಲೆ ಕುಳಿತ ಅವರನ್ನು ಪೊಲೀಸರು ಬಲವಂತವಾಗಿ ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.</p>.<p>ಯಲಹಂಕದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಿಗ್ವಿಜಯ್ ಸಿಂಗ್ ಅವರನ್ನು ಕೆಲಹೊತ್ತು ಕೂರಿಸಲಾಗಿತ್ತು. ಈ ಸಂದರ್ಭದಲ್ಲಿ ಶಿವಕುಮಾರ್ ಅವರಲ್ಲದೆ, ಕೃಷ್ಣ ಬೈರೇಗೌಡ, ರಿಜ್ಷಾನ್ ಅರ್ಷದ್, ಎನ್.ಎ. ಹ್ಯಾರಿಸ್ ಮತ್ತಿತರರು ಇದ್ದರು.</p>.<p>ಇತ್ತೀಚೆಗೆ ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಜೀತೂ ಪಟವಾರಿ ತಮ್ಮ ಶಾಸಕರನ್ನು ಭೇಟಿಯಾಗಲು ಬಂದಿದ್ದಾಗಲೂ ಪೊಲೀಸರ ಜತೆ ಜಟಾಪಟಿ ನಡೆಸಿದ್ದರು.ಾನಂತರ ಅವರನ್ನೂ ಬಂಧಿಸಿ, ಬಿಡುಗಡೆ ಮಾಡಲಾಗಿತ್ತು.</p>.<p>‘ಕೆಲವು ಸ್ಥಳೀಯ ಬಿಜೆಪಿ ನಾಯಕರ ಭದ್ರತೆಯಲ್ಲಿರುವ ತಮ್ಮ ಮಗನನ್ನು ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಬಂಡಾಯ ಶಾಸಕ ಚೌಧರಿ ಅವರ ತಂದೆ ನಾರಾಯಣ ಚೌಧರಿ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾ ನಿರೀಕ್ಷಕ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>