ಪೀಠ ಉದ್ಘಾಟನೆ ಬಳಿಕ ಮಾತನಾಡಿದ ರಾಜ್ಯಪಾಲರು, ‘ಕಾವೇರಿ, ತುಂಗಭದ್ರಾ ಮತ್ತು ಕೃಷ್ಣಾ ನದಿಗೆ ದೊಡ್ಡ ದೊಡ್ಡ ಜಲಾಶಯಗಳನ್ನು ಕಟ್ಟಲಾಗಿದೆ. ಆದರೆ, ನೀರಿನ ಕೊರತೆಯ ಸಮಸ್ಯೆ ಪರಿಹಾರವಾಗಿದೆಯೇ? ಚಿಕ್ಕ ಜಲಾಶಯ ನಿರ್ಮಾಣದಿಂದ ಆ ಭಾಗದ ಜನರಿಗೆ ಅನುಕೂಲವಾಗುತ್ತದೆ’ ಎಂದರು. ‘ರೈತರಿಗೆ ಸಾಲ ಕೊಡಬೇಕಾಗಿಲ್ಲ. ಅವರಿಗೆ ಬೇಕಾಗಿರುವುದು ನೀರು. ನದಿಗಳ ಜೋಡಣೆಯಿಂದ ಇದು ಸಾಧ್ಯವಾಗುತ್ತದೆ. ಇದರೊಂದಿಗೆ ವಾಟರ್ ಗ್ರಿಡ್ ಯೋಜನೆ ಜಾರಿಗೊಳಿಸಬೇಕು’ ಎಂದರು.