ಬೆಂಗಳೂರು: ಅಂಕೋಲಾದ ದಿನಕರ ದೇಸಾಯಿ ಪ್ರತಿಷ್ಠಾನ ನೀಡುವ ಪ್ರಸಕ್ತ ಸಾಲಿನ ‘ದಿನಕರ ದೇಸಾಯಿ ಕಾವ್ಯ ಪ್ರಶಸ್ತಿ’ಗೆ ಕಾವ್ಯ ಕಡಮೆ ನಾಗರಕಟ್ಟೆ ಅವರ ‘ಜೀನ್ಸ್ ತೊಟ್ಟ ದೇವರು’ ಕವನ ಸಂಕಲನ ಆಯ್ಕೆಯಾಗಿದೆ.
ಪ್ರಶಸ್ತಿಯು ₹10,000 ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ 11 ರಂದು ಅಂಕೋಲಾದ ಗಂಗಾದೇವಿ ತೊರ್ಕೆ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.