ರಾಯಚೂರು: ಬೆಂಗಳೂರಿನ ಏರ್ ಶೋ ಸ್ಥಳದಲ್ಲಿ ಸಂಭವಿಸಿರುವ ಅಗ್ನಿ ಅವಘಡವನ್ನು ಬಿಜೆಪಿ ಅಸ್ತ್ರವನ್ನಾಗಿ ಮಾಡಿಕೊಳ್ಳಬಾರದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಶನಿವಾರ ಸುದ್ದಿಗಾರ ಜತೆ ಮಾತನಾಡಿದ ಅವರು, ‘ಏರ್ ಶೋ ಮುನ್ನಾದಿನ ಎರಡು ವಿಮಾನಗಳು ಡಿಕ್ಕಿ ಹೊಡೆದವು. ಈಗ ಪಾರ್ಕಿಂಗ್ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ವಾಹನಗಳು ಸುಟ್ಟು ಕರಕಲಾಗಿವೆ. ಇವುಗಳನ್ನೇ ನೆಪವನ್ನಾಗಿ ಮಾಡಿಕೊಂಡು ಏರ್ ಶೋ ಸ್ಥಳಾಂತರಿಸಲು ಬಿಜೆಪಿ ಈಗಾಗಲೇ ಪ್ರಯತ್ನ ಮಾಡಿದೆ’ ಎಂದು ದೂರಿದರು.