ಪ್ರತಿಭಟನೆ ನಡೆಸುತ್ತಿದ್ದ ಯುವಕರು ಭದ್ರತಾ ಪಡೆಗಳತ್ತ ಕಲ್ಲುತೂರಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಅಶ್ರುವಾಯು, ರಬ್ಬರ್ ಗುಂಡುಗಳನ್ನು ಸಿಡಿಸಿ ಕಲ್ಲುತೂರಾಟ ನಡೆಸುತ್ತಿದ್ದವರನ್ನು ಚದುರಿಸಲು ಪ್ರಯತ್ನಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಬ್ರಕ್ಪೊರಾದ ಶೀರಜ್ ಅಹ್ಮದ್ ಎಂಬುವವರು ಮೃತಪಟ್ಟಿದ್ದಾರೆ. ಇನ್ನಿಬ್ಬರ ಕಣ್ಣಿಗೆ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.