ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನರ್ಹ ಶಾಸಕರ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

Last Updated 17 ಸೆಪ್ಟೆಂಬರ್ 2019, 5:29 IST
ಅಕ್ಷರ ಗಾತ್ರ

ನವದೆಹಲಿ: ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ ಸ್ಪೀಕರ್‌ ಆದೇಶದ ಸಿಂಧುತ್ವ ಪ್ರಶ್ನಿಸಿ 17 ಜನ ಅನರ್ಹರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ಸೋಮವಾರಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಪ್ರಕರಣದ ತುರ್ತು ವಿಚಾರಣೆಗೆ ಕೋರಿ ಅನರ್ಹರ ಪರ ವಕೀಲರು ಈ ಹಿಂದೆ ಮೂರು ಬಾರಿ ಮಾಡಿಕೊಂಡ ಮನವಿಯನ್ನು ತಿರಸ್ಕರಿಸಿದ್ದ ಪೀಠ, ರಿಜಿಸ್ಟ್ರಾರ್ ಕಚೇರಿ ಮೂಲಕವೇ ಪ್ರಕರಣವು ವಿಚಾರಣೆಗಾಗಿ ಪಟ್ಟಿಯಾಗಲಿ ಎಂದು ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT