ನಡೆದಿದ್ದೇನು..?:ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ನವಗ್ರಾಮ ಅಂಗನವಾಡಿ ಕೇಂದ್ರಕ್ಕೆ ಅಡುಗೆ ಸಹಾಯಕಿಯಾಗಿ ದಲಿತ ಮಹಿಳೆ ಕೆ.ಎ. ಶಾಂತಾ ಅವರನ್ನು ನಿಯೋಜಿಸಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಆದೇಶಿದ್ದರು. ನಿಯೋಜಿಸಲ್ಪಟ್ಟ ಸಹಾಯಕಿ ದಲಿತೆ ಎಂಬ ಕಾರಣಕ್ಕಾಗಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಕಲಾವತಿ ಕೇಂದ್ರಕ್ಕೆ ಬೀಗ ಹಾಕಿ ಅವರೂ ಕರ್ತವ್ಯಕ್ಕೂ ಗೈರು ಹಾಜರಾಗಿದ್ದಾರೆ ಎನ್ನಲಾಗಿದೆ.