ಬೆಂಗಳೂರು:ಕಾವೇರಿ ನದಿಯ ಪುನಶ್ಚೇತನಕ್ಕಾಗಿ ಇಶಾ ಫೌಂಡೇಷನ್ನ ಸಂಸ್ಥಾಪಕ ಜಗ್ಗಿ ವಾಸುದೇವ್ (ಸದ್ಗುರು) ನೇತೃತ್ವದಲ್ಲಿ ಆರಂಭವಾಗಿರುವ ‘ಕಾವೇರಿ ಕೂಗು’ ಅಭಿಯಾನಕ್ಕೆ ರಾಜ್ಯ ಸರ್ಕಾರ ಬೆಂಬಲ ನೀಡಿದ್ದು, ಮೊದಲ ಹಂತದಲ್ಲಿ 73 ಲಕ್ಷ ಸಸಿಗಳನ್ನು ರೈತರಿಗೆ ವಿತರಿಸಲಾಗುತ್ತದೆ.
ಈ ಅಭಿಯಾನಕ್ಕೆ ಕೃಷಿ ತಜ್ಞರು, ಮಣ್ಣಿನ ವಿಜ್ಞಾನಿಗಳು, ಜಲವಿಜ್ಞಾನಿಗಳು ಹಾಗೂ ಸಾರ್ವಜನಿಕರು ಬೆಂಬಲಸೂಚಿಸಿದ್ದಾರೆ. ರಾಜ್ಯ ಸರ್ಕಾರವು ರೈತರಿಗೆ 3 ಕೋಟಿ ಸಸಿಗಳನ್ನು ವಿತರಿಸುವುದಾಗಿ ಭರವಸೆ ನೀಡಿದೆ.ಕಳೆದ ಜುಲೈನಲ್ಲಿ ಯೋಜನೆ ಪ್ರಾರಂಭವಾಗಿದ್ದು, ರಾಜ್ಯದ ಎಲ್ಲೆಡೆ ಉತ್ತಮ ಸ್ಪಂದನೆ ದೊರೆತಿದೆ.
ಕಾವೇರಿ ಜಲಾನಯನ ಪ್ರದೇಶದ ಮೂರನೇ ಒಂದು ಭಾಗದಲ್ಲಿ 242 ಕೋಟಿ ಗಿಡಗಳನ್ನು ಬೆಳೆಸುವ ಗುರಿಯನ್ನು ಹಾಕಿಕೊಂಡಿರುವುದಾಗಿ ಫೌಂಡೇಷನ್ ತಿಳಿಸಿದೆ.