ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

73 ಲಕ್ಷ ಸಸಿಗಳ ವಿತರಣೆ

ಕಾವೇರಿ ಕೂಗಿಗೆ ರಾಜ್ಯ ಸರ್ಕಾರ ಬೆಂಬಲ
Last Updated 8 ಜನವರಿ 2020, 20:12 IST
ಅಕ್ಷರ ಗಾತ್ರ

ಬೆಂಗಳೂರು:ಕಾವೇರಿ ನದಿಯ ಪುನಶ್ಚೇತನಕ್ಕಾಗಿ ಇಶಾ ಫೌಂಡೇಷನ್‌ನ ಸಂಸ್ಥಾಪಕ ಜಗ್ಗಿ ವಾಸುದೇವ್ (ಸದ್ಗುರು) ನೇತೃತ್ವದಲ್ಲಿ ಆರಂಭವಾಗಿರುವ ‘ಕಾವೇರಿ ಕೂಗು’ ಅಭಿಯಾನಕ್ಕೆ ರಾಜ್ಯ ಸರ್ಕಾರ ಬೆಂಬಲ ನೀಡಿದ್ದು, ಮೊದಲ ಹಂತದಲ್ಲಿ 73 ಲಕ್ಷ ಸಸಿಗಳನ್ನು ರೈತರಿಗೆ ವಿತರಿಸಲಾಗುತ್ತದೆ.

ಈ ಅಭಿಯಾನಕ್ಕೆ ಕೃಷಿ ತಜ್ಞರು, ಮಣ್ಣಿನ ವಿಜ್ಞಾನಿಗಳು, ಜಲವಿಜ್ಞಾನಿಗಳು ಹಾಗೂ ಸಾರ್ವಜನಿಕರು ಬೆಂಬಲಸೂಚಿಸಿದ್ದಾರೆ. ರಾಜ್ಯ ಸರ್ಕಾರವು ರೈತರಿಗೆ 3 ಕೋಟಿ ಸಸಿಗಳನ್ನು ವಿತರಿಸುವುದಾಗಿ ಭರವಸೆ ನೀಡಿದೆ.ಕಳೆದ ಜುಲೈನಲ್ಲಿ ಯೋಜನೆ ಪ್ರಾರಂಭವಾಗಿದ್ದು, ರಾಜ್ಯದ ಎಲ್ಲೆಡೆ ಉತ್ತಮ ಸ್ಪಂದನೆ ದೊರೆತಿದೆ.

ಕಾವೇರಿ ಜಲಾನಯನ ಪ್ರದೇಶದ ಮೂರನೇ ಒಂದು ಭಾಗದಲ್ಲಿ 242 ಕೋಟಿ ಗಿಡಗಳನ್ನು ಬೆಳೆಸುವ ಗುರಿಯನ್ನು ಹಾಕಿಕೊಂಡಿರುವುದಾಗಿ ಫೌಂಡೇಷನ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT