ರಾಜಕೀಯವಾಗಿ ಪ್ರಭಾವಿ ಜಿಲ್ಲೆ ಎನಿಸಿರುವ ಬೆಳಗಾವಿ ಜಿಲ್ಲೆಗೆ ಜಗದೀಶ ಶೆಟ್ಟರ್ ಅವರನ್ನು ನೇಮಕ ಮಾಡಿದಾಗ ರಮೇಶ ಜಾರಕಿಹೊಳಿಗೆ ಹಿನ್ನಡೆ ಎಂದೇ ವ್ಯಾಖ್ಯಾನಿಸಲಾಗಿತ್ತು. ಬಿಜೆಪಿ ಸೇರುವುದಕ್ಕೆ ಮೊದಲೇ ಜಲಸಂಪನ್ಮೂಲ ಖಾತೆ ಮತ್ತು ಜಿಲ್ಲಾ ಉಸ್ತುವಾರಿಗೆ ಬೇಡಿಕೆ ಇಟ್ಟಿದ್ದರು. ಇದೀಗ ಅವರು ಬಯಸಿದಂತೆ ಜಿಲ್ಲಾ ಉಸ್ತುವಾರಿಯೂ ಸಿಕ್ಕಿದೆ.