‘ಆದಾಯ ತೆರಿಗೆ ಇಲಾಖೆ, ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಇದರನ್ವಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಸಿಐಆರ್ (ಪೊಲೀಸ್ ಎಫ್ಐಆರ್ಗೆ ಸಮಾನವಾದ–ಜಾರಿ ಪ್ರಕರಣ ಮಾಹಿತಿ ವರದಿ) ದಾಖಲಿಸಿದ್ದಾರೆ. ಹೀಗಾಗಿ, ಈ ಹಂತದಲ್ಲಿ ಆರೋಪಿಗಳ ಅರ್ಜಿಗಳು ವಿಚಾರಣೆಗೆ ಅರ್ಹವಾಗಿಲ್ಲ’ ಎಂದು ಏಕಸದಸ್ಯ ಪೀಠ ತೀರ್ಪಿನಲ್ಲಿ ತಿಳಿಸಿತ್ತು.