ಅದ್ಧೂರಿ ಸ್ವಾಗತ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಂಧಿತರಾಗಿ ಜೈಲಿನಿಂದ ಬಿಡುಗಡೆಯಾದ ಬಳಿಕ ಗುರುವಾರ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರನ್ನು ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. 200 ಕೆ.ಜಿ.ತೂಕದ 25 ಅಡಿ ಉದ್ದದ ಸೇಬಿನ ಹಣ್ಣಿನ ಹಾಗೂ ಸೇವಂತಿಗೆ, ಗುಲಾಬಿ ಹೂಗಳಿಂದ ತಯಾರಿಸಿದ ಬೃಹದಾಕಾರದ ಹಾರಗಳನ್ನು ಕ್ರೇನ್ ಮೂಲಕ ಹಾಕಿ ಸ್ವಾಗತ ಕೋರಿದರು.