ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಜಾರಿಗೊಳಿಸಿರುವ ಸಮನ್ಸ್ ಪ್ರಶ್ನಿಸಿದ ಪ್ರಕರಣದಲ್ಲಿ ಹೈಕೋರ್ಟ್ಗೆ, ಜಾರಿ ಪ್ರಕರಣ ಮಾಹಿತಿ ವರದಿ (ಇಸಿಐಆರ್) ಸಲ್ಲಿಸಲಾಗಿದೆ.
‘₹ 8.60 ಕೋಟಿ ಪತ್ತೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಬೇಕು’ ಎಂದು ಇ.ಡಿ ನೀಡಿರುವ ಸಮನ್ಸ್ ರದ್ದು ಕೋರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಐವರು ಆರೋಪಿಗಳು ಸಲ್ಲಿಸಿರುವ ರಿಟ್ ಅರ್ಜಿಗಳ ವಿಚಾರಣೆಯನ್ನು ನ್ಯಾಯಪೀಠ ಗುರುವಾರ ನಡೆಸಿತು.
ಇ.ಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ, ‘ತನಿಖೆ ಇನ್ನೂ ಬಾಕಿ ಇದೆ. ಸಮನ್ಸ್ ರದ್ದು ಮಾಡಿ ಎಂಬುದು ಪರಿಪಕ್ವ ಕೋರಿಕೆಯಲ್ಲ’ ಎಂದರು.