ತಿಪಟೂರು (ತುಮಕೂರು): ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಕ್ಕೆ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸದಸ್ಯರೊಂದಿಗೆ ಭಾನುವಾರ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಡಿಕೆಶಿ ಅವರ ಪೂಜಾ ಕೈಂಕರ್ಯಗಳನ್ನು ನಡೆಸಿಕೊಟ್ಟರು.
ಮಠದಿಂದ ಹೊರಡುವಾಗ ಡಿಕೆಶಿ ಅವರು ಆನೆಗೆ ನಮಿಸಿದರು.
ತುರುವೇಕೆರೆ ಮೂಲಕ ಮಠಕ್ಕೆ ಹೋಗುವಾಗ ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ ಅವರಿಗೆ ಸನ್ಮಾನ ಮಾಡಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಠದ ಆವರಣಕ್ಕೆ ಶಾಸಕರು ಬಂದಾಗ, ಸೇರಿದ್ದ ಕಾರ್ಯಕರ್ತರು ಜೈಕಾರಗಳನ್ನು ಹಾಕಿ, ಪಟಾಕಿಗಳನ್ನು ಸಿಡಿಸಿ ಸ್ವಾಗತಿಸಿದರು.
ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಕ್ಕೆ ಡಿ.ಕೆ ಶಿವಕುಮಾರ್ ಅವರು ಬಹಳ ಹಿಂದಿನಿಂದಲೂ ನಡೆದುಕೊಂಡು ಬರುತ್ತಿದ್ದಾರೆ. ಇ.ಡಿ ವಿಚಾರಣೆಗೆ ಕರೆದಾಗಲೂ ಡಿಕೆಶಿ ಮಠಕ್ಕೆ ಬಂದಿದ್ದರು.