ನಂತರ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ‘ಅರೇಬಿಕ್ ವಿದ್ಯಾ ಸಂಸ್ಥೆ ಧರ್ಮ ಹಾಗೂ ಶಾಂತಿಯನ್ನು ಕಾಪಾಡಲು ಇರುವ ಪವಿತ್ರ ಸಂಸ್ಥೆ. ಈ ಧರ್ಮ ಪೀಠದ ಪ್ರಮುಖರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇನೆ. ನಾನು ಎಲ್ಲ ಧರ್ಮಗಳನ್ನು ನಂಬಿ ಗೌರವಿಸುತ್ತಾ ಬಂದಿದ್ದೇನೆ. ಜಾತ್ಯಾತೀತ ತತ್ವಕ್ಕೆ ಒತ್ತು ಕೊಟ್ಟಿದ್ದೇನೆ. ಎಲ್ಲ ಧರ್ಮಗುರುಗಳ, ಗುರುಹಿರಿಯರ ಆಶೀರ್ವಾದ ಪಡೆದಿದ್ದು, ಬಹಳ ಸಂತೋಷವಾಗಿದೆ’ಎಂದರು.