<p><strong>ಹುಬ್ಬಳ್ಳಿ:</strong> ‘ಕಾಂಗ್ರೆಸ್ನ ಒಬ್ಬನೇ ಒಬ್ಬ ಶಾಸಕನನ್ನೂ ಬಿಜೆಪಿ ಮುಖಂಡರು ಮುಟ್ಟಲು ಸಾಧ್ಯವಿಲ್ಲ. ಸರ್ಕಾರ ಉರುಳಿಸಲು ಅಷ್ಟು ಸುಲಭವಾಗಿ ನಾವು ಬಿಡುವುದಿಲ್ಲ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದರೆ ಹುಷಾರ್ ಎಂದು ಜಗದೀಶ ಶೆಟ್ಟರ್ ಹೇಳುತ್ತಾರೆ. ಅವರ ಕಾರ್ಯಕರ್ತರನ್ನೇ ಹಿಡಿದಿಟ್ಟುಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ, ಇನ್ನೂ ನಮ್ಮ ಪಕ್ಷದ 20 ಶಾಸಕರನ್ನು ಸೆಳೆಯುತ್ತಾರೆಯೇ’ ಎಂದು ವ್ಯಂಗ್ಯವಾಡಿದರು.</p>.<p>ಶಿವಕುಮಾರ್ ಕಾರಿನ ಟಯರ್ನಲ್ಲಿ ಹಣ ಸಾಗಿಸುತ್ತಿದ್ದಾರೆ ಎಂಬ ಶೋಭಾ ಕರಂದ್ಲಾಜೆ ಅವರ ಆರೋಪಕ್ಕೆ, ‘ಶೋಭಾ ಕರಂದ್ಲಾಜೆ ನನ್ನ ಗಾಡಿಯಲ್ಲೇ ಬಂದು ಕುಳಿತುಕೊಳ್ಳಲಿ, ಯಾರು ಬೇಡ ಅಂತಾರೆ. ಹಣವಿದ್ದರೆ ಅದನ್ನು ಅಕ್ಕನ ಬ್ಯಾಗ್ನಲ್ಲೇ ತುಂಬಿ ಕಳಿಸುತ್ತೇನೆ’ ಎಂದು ತಿರುಗೇಟು ನೀಡಿದರು.</p>.<p>‘ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಶಿವಕುಮಾರನನ್ನು ಜೈಲಿಗೆ ಕಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಈ ಹಿಂದೆ ಶ್ರೀರಾಮುಲು ಅಣ್ಣನವರು ಸಹ ಇದೇ ರೀತಿ ಹೇಳಿದ್ದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಕಾಂಗ್ರೆಸ್ನ ಒಬ್ಬನೇ ಒಬ್ಬ ಶಾಸಕನನ್ನೂ ಬಿಜೆಪಿ ಮುಖಂಡರು ಮುಟ್ಟಲು ಸಾಧ್ಯವಿಲ್ಲ. ಸರ್ಕಾರ ಉರುಳಿಸಲು ಅಷ್ಟು ಸುಲಭವಾಗಿ ನಾವು ಬಿಡುವುದಿಲ್ಲ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದರೆ ಹುಷಾರ್ ಎಂದು ಜಗದೀಶ ಶೆಟ್ಟರ್ ಹೇಳುತ್ತಾರೆ. ಅವರ ಕಾರ್ಯಕರ್ತರನ್ನೇ ಹಿಡಿದಿಟ್ಟುಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ, ಇನ್ನೂ ನಮ್ಮ ಪಕ್ಷದ 20 ಶಾಸಕರನ್ನು ಸೆಳೆಯುತ್ತಾರೆಯೇ’ ಎಂದು ವ್ಯಂಗ್ಯವಾಡಿದರು.</p>.<p>ಶಿವಕುಮಾರ್ ಕಾರಿನ ಟಯರ್ನಲ್ಲಿ ಹಣ ಸಾಗಿಸುತ್ತಿದ್ದಾರೆ ಎಂಬ ಶೋಭಾ ಕರಂದ್ಲಾಜೆ ಅವರ ಆರೋಪಕ್ಕೆ, ‘ಶೋಭಾ ಕರಂದ್ಲಾಜೆ ನನ್ನ ಗಾಡಿಯಲ್ಲೇ ಬಂದು ಕುಳಿತುಕೊಳ್ಳಲಿ, ಯಾರು ಬೇಡ ಅಂತಾರೆ. ಹಣವಿದ್ದರೆ ಅದನ್ನು ಅಕ್ಕನ ಬ್ಯಾಗ್ನಲ್ಲೇ ತುಂಬಿ ಕಳಿಸುತ್ತೇನೆ’ ಎಂದು ತಿರುಗೇಟು ನೀಡಿದರು.</p>.<p>‘ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಶಿವಕುಮಾರನನ್ನು ಜೈಲಿಗೆ ಕಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಈ ಹಿಂದೆ ಶ್ರೀರಾಮುಲು ಅಣ್ಣನವರು ಸಹ ಇದೇ ರೀತಿ ಹೇಳಿದ್ದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>