ಅನರ್ಹಗೊಂಡ ಶಾಸಕರಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಇನ್ನು ಯಾವುದೇ ನಿರ್ಧಾರ ಆಗಿಲ್ಲ, ಆದರೆ, ರಾಜ್ಯದಲ್ಲಿ ಯಾರಿಂದಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂಬುದು ಪಕ್ಷದ ಕಾರ್ಯಕರ್ತರಿಗೆ ತಿಳಿದಿದೆ. ಅನರ್ಹಗೊಂಡ ಶಾಸಕರ ಬಗ್ಗೆ ಸುಪ್ರಿಂ ಕೋರ್ಟ್ ಅಂತಿಮ ತೀರ್ಪು ನೀಡಿದ ಬಳಿಕ ಅನರ್ಹರಿಗೆ ಅಥವಾ ಪಕ್ಷದವರಿಗೆ ಟಿಕೆಟ್ ನೀಡಬೇಕೆ ಎಂಬುದನ್ನು ನಿರ್ಧರಿಸಲಾಗುವುದು.