ಬೆಂಗಳೂರು: ಮೊಬೈಲ್ ಕರೆ ವೇಳೆ ಕೇಳಿ ಬರುವ ಕೋವಿಡ್-19 ಕುರಿತ ಮುನ್ನೆಚ್ಚರಿಕಾ ಸಂದೇಶದ ಬಗ್ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೊಬೈಲ್ ದೂರವಾಣಿ ಕರೆಗಳ ಆರಂಭದಲ್ಲಿ ನೀಡಲಾಗುತ್ತಿರುವ ಕೊರೋನಾ ಕುರಿತ ಮುನ್ನಚರಿಕಾ ಸಂದೇಶವು ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು ಎಂಬಂತಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
“ಎಮ್ಮೆಗೆ ಜ್ವರ ಬಂದರೆ ಎತ್ತಿಗೆ ಬರೆ’’ ಹಾಕಿದಂತಾಗಿದೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲ ದೂರವಾಣಿ ಕರೆಗಳ ಆರಂಭದಲ್ಲಿ ನೀಡುತ್ತಿರುವ ಕರೋನಾ ಕುರಿತ ಮುನ್ನೆಚ್ಚರಿಕೆ ಸಂದೇಶ.
ದೇಶದ ಜನ ಇದರಿಂದ ತಲ್ಲಣಿಸಿ ಹೋಗಿದ್ದಾರೆ. ಹಣ್ಣು, ತರಕಾರಿಯಿಂದ ಹಿಡಿದು ಷೇರುಗಳವರೆಗೆ ಸರ್ವಮಾರುಕಟ್ಟೆಯೂ ಪಾತಾಳಕ್ಕೆ ಕುಸಿದಿದೆ.
ದೇಶದ ಆರ್ಥಿಕ ವ್ಯವಸ್ಥೆ ಮತ್ತಷ್ಟು ಹದಗೆಟ್ಟಿದೆ. ಸಮಸ್ಯೆ ಇರುವೆಡೆ ಕ್ರಮ ಕೈಗೊಳ್ಳಬೇಕೇ ಹೊರತು ಈ ರೀತಿ ಸಾಮೂಹಿಕವಾಗಿ ಜನರನ್ನು ಹೆದರಿಸುವುದು ಸರಿಯಲ್ಲ ಎಂದೂ ಅವರು ಎಚ್ಚರಿಸಿದ್ದಾರೆ.