<p><strong>ಬೆಂಗಳೂರು</strong>: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆಯುವವರು, ಸಣ್ಣ ರಾಜಕಾರಣ ಮಾಡುವುದಿಲ್ಲ ಅಂದುಕೊಂಡಿದ್ದೆ. ಆದರೆ ನನ್ನ ಪದಗ್ರಹಣ ವಿಚಾರದಲ್ಲಿ ಆ ನಂಬಿಕೆ ಹುಸಿಯಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.</p>.<p>ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು. ಸರ್ಕಾರ ಒಪ್ಪಿಗೆ ಕೊಟ್ಡ ಮೇಲಷ್ಟೇ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p>‘ಇದು ಇಡೀ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕ್ರಮ. ಯಾವುದೇ ಕಾರಣಕ್ಕೂ ನಾವು ಇದನ್ನು ನಿಲ್ಲಿಸುವುದಿಲ್ಲ. ಈಗ ಯೋಜಿಸಿರುವಂತೆ ರೀತಿಯಲ್ಲೇ ನಡೆಯುತ್ತದೆ. ದಿನಾಂಕವನ್ನು ಮುಂದೆ ತಿಳಿಸಲಾಗುವುದು’ ಎಂದು ಅವರು ತಿಳಿಸಿದರು.</p>.<p>'ರಾಜ್ಯ ಸರ್ಕಾರದ ಬಹುತೇಕ ಸಚಿವರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಅವರ ವಿರುದ್ಧ ಯಾವ ಕ್ರಮವೂ ಇಲ್ಲ. ನಾವು ಕಾನೂನಾತ್ಮಕವಾಗಿ ಅನುಮತಿ ಕೇಳಿದರೆ ಕೊಡುತ್ತಿಲ್ಲ. ಸರ್ಕಾರದ ಈ ದ್ವಂದ್ವ ನಿಲುವು ಅರ್ಥವಾಗುತ್ತಿಲ್ಲ. ಪದಗ್ರಹಣ ಸಮಾರಂಭಕ್ಕೆ ಅನುಮತಿ ನಿರಾಕರಿಸುವುದರ ಹಿಂದೆ ರಾಜಕೀಯ ದುರುದ್ದೇಶ ಕಾಣುತ್ತಿದೆ. ನಾವು ಕಾನೂನನ್ನು ಗೌರವಿಸುತ್ತೇವೆ. ಹೀಗಾಗಿ ಅವರು ಅನುಮತಿ ಕೊಟ್ಟಾಗಲೇ ಕಾರ್ಯಕ್ರಮ ಮಾಡುತ್ತೇವೆ' ಎಂದು ಹೇಳಿದರು.</p>.<p>'ನಾನು ಮನೆಯಲ್ಲಿ ಕೂರಲ್ಲ. ವಿಧಾನ ಪರಿಷತ್ ಚುನಾವಣೆ ಬಳಿಕ ರಾಜಕೀಯೇತರ ಪ್ರವಾಸ ಮಾಡುತ್ತೇನೆ. ಕೊರೊನಾದಲ್ಲಿ ಜನರ ಕಷ್ಟಗಳೇನು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಪ್ಯಾಕೇಜ್ ತಲುಪಿದೆಯಾ ಎಂದು ಕೇಳುತ್ತಾ, ಜನರ ಕಷ್ಟಗಳಿಗೆ ಸ್ಪಂದಿಸುತ್ತೇನೆ. ನಮ್ಮ ಪಕ್ಷದ ಎಲ್ಲಾ ನಾಯಕರು ಈ ಪ್ರವಾಸದಲ್ಲಿ ಭಾಗವಹಿಸುತ್ತಾರೆ. ಬಾವುಟ ಬಳಸುವುದಿಲ್ಲ’ ಎಂದರು.</p>.<p><strong>‘ನಕಲು ಮಾಡಿದ ಬಿಜೆಪಿ’</strong><br />‘ಆನ್ಲೈನ್ ಕಾರ್ಯಕ್ರಮ ನಮ್ಮ ಚಿಂತನೆಯಾಗಿತ್ತು. ಅದನ್ನು ಬಿಜೆಪಿ ನಕಲು ಮಾಡಿದೆ. ನಮಗೆ ಅನುಮತಿ ನಿರಾಕರಿಸಿ ಬಿಜೆಪಿ ವತಿಯಿಂದ ನಮ್ಮದೇ ರೀತಿಯಲ್ಲಿ ವರ್ಚುವಲ್ ಕಾರ್ಯಕ್ರಮ ಮಾಡಲಾಗುತ್ತಿದೆ. ರಾಷ್ಟ್ರೀಯ ಪ್ರಕೃತಿ ವಿಕೋಪ ಕಾನೂನನ್ನು ರಾಜಕೀಯವಾಗಿ ದುರ್ಬಳಕೆ ಮಾಡಲಾಗುತ್ತಿದೆ’ ಎಂದು ಶಿವಕುಮಾರ್ ದೂರಿದರು.</p>.<p>**</p>.<p>ನನಗೆ ಮುಖ್ಯಮಂತ್ರಿಯವರ ಪ್ರೀತಿ ಬೇಕಿಲ್ಲ. ಜನರ ಪ್ರೀತಿ ಇದ್ದರೆ ಸಾಕು. ಶೀಘ್ರ ಜನರತ್ತ ತೆರಳಿ ಅವರ ಕಷ್ಟ ಆಲಿಸುತ್ತೇನೆ<br /><em><strong>-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆಯುವವರು, ಸಣ್ಣ ರಾಜಕಾರಣ ಮಾಡುವುದಿಲ್ಲ ಅಂದುಕೊಂಡಿದ್ದೆ. ಆದರೆ ನನ್ನ ಪದಗ್ರಹಣ ವಿಚಾರದಲ್ಲಿ ಆ ನಂಬಿಕೆ ಹುಸಿಯಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.</p>.<p>ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು. ಸರ್ಕಾರ ಒಪ್ಪಿಗೆ ಕೊಟ್ಡ ಮೇಲಷ್ಟೇ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p>‘ಇದು ಇಡೀ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕ್ರಮ. ಯಾವುದೇ ಕಾರಣಕ್ಕೂ ನಾವು ಇದನ್ನು ನಿಲ್ಲಿಸುವುದಿಲ್ಲ. ಈಗ ಯೋಜಿಸಿರುವಂತೆ ರೀತಿಯಲ್ಲೇ ನಡೆಯುತ್ತದೆ. ದಿನಾಂಕವನ್ನು ಮುಂದೆ ತಿಳಿಸಲಾಗುವುದು’ ಎಂದು ಅವರು ತಿಳಿಸಿದರು.</p>.<p>'ರಾಜ್ಯ ಸರ್ಕಾರದ ಬಹುತೇಕ ಸಚಿವರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಅವರ ವಿರುದ್ಧ ಯಾವ ಕ್ರಮವೂ ಇಲ್ಲ. ನಾವು ಕಾನೂನಾತ್ಮಕವಾಗಿ ಅನುಮತಿ ಕೇಳಿದರೆ ಕೊಡುತ್ತಿಲ್ಲ. ಸರ್ಕಾರದ ಈ ದ್ವಂದ್ವ ನಿಲುವು ಅರ್ಥವಾಗುತ್ತಿಲ್ಲ. ಪದಗ್ರಹಣ ಸಮಾರಂಭಕ್ಕೆ ಅನುಮತಿ ನಿರಾಕರಿಸುವುದರ ಹಿಂದೆ ರಾಜಕೀಯ ದುರುದ್ದೇಶ ಕಾಣುತ್ತಿದೆ. ನಾವು ಕಾನೂನನ್ನು ಗೌರವಿಸುತ್ತೇವೆ. ಹೀಗಾಗಿ ಅವರು ಅನುಮತಿ ಕೊಟ್ಟಾಗಲೇ ಕಾರ್ಯಕ್ರಮ ಮಾಡುತ್ತೇವೆ' ಎಂದು ಹೇಳಿದರು.</p>.<p>'ನಾನು ಮನೆಯಲ್ಲಿ ಕೂರಲ್ಲ. ವಿಧಾನ ಪರಿಷತ್ ಚುನಾವಣೆ ಬಳಿಕ ರಾಜಕೀಯೇತರ ಪ್ರವಾಸ ಮಾಡುತ್ತೇನೆ. ಕೊರೊನಾದಲ್ಲಿ ಜನರ ಕಷ್ಟಗಳೇನು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಪ್ಯಾಕೇಜ್ ತಲುಪಿದೆಯಾ ಎಂದು ಕೇಳುತ್ತಾ, ಜನರ ಕಷ್ಟಗಳಿಗೆ ಸ್ಪಂದಿಸುತ್ತೇನೆ. ನಮ್ಮ ಪಕ್ಷದ ಎಲ್ಲಾ ನಾಯಕರು ಈ ಪ್ರವಾಸದಲ್ಲಿ ಭಾಗವಹಿಸುತ್ತಾರೆ. ಬಾವುಟ ಬಳಸುವುದಿಲ್ಲ’ ಎಂದರು.</p>.<p><strong>‘ನಕಲು ಮಾಡಿದ ಬಿಜೆಪಿ’</strong><br />‘ಆನ್ಲೈನ್ ಕಾರ್ಯಕ್ರಮ ನಮ್ಮ ಚಿಂತನೆಯಾಗಿತ್ತು. ಅದನ್ನು ಬಿಜೆಪಿ ನಕಲು ಮಾಡಿದೆ. ನಮಗೆ ಅನುಮತಿ ನಿರಾಕರಿಸಿ ಬಿಜೆಪಿ ವತಿಯಿಂದ ನಮ್ಮದೇ ರೀತಿಯಲ್ಲಿ ವರ್ಚುವಲ್ ಕಾರ್ಯಕ್ರಮ ಮಾಡಲಾಗುತ್ತಿದೆ. ರಾಷ್ಟ್ರೀಯ ಪ್ರಕೃತಿ ವಿಕೋಪ ಕಾನೂನನ್ನು ರಾಜಕೀಯವಾಗಿ ದುರ್ಬಳಕೆ ಮಾಡಲಾಗುತ್ತಿದೆ’ ಎಂದು ಶಿವಕುಮಾರ್ ದೂರಿದರು.</p>.<p>**</p>.<p>ನನಗೆ ಮುಖ್ಯಮಂತ್ರಿಯವರ ಪ್ರೀತಿ ಬೇಕಿಲ್ಲ. ಜನರ ಪ್ರೀತಿ ಇದ್ದರೆ ಸಾಕು. ಶೀಘ್ರ ಜನರತ್ತ ತೆರಳಿ ಅವರ ಕಷ್ಟ ಆಲಿಸುತ್ತೇನೆ<br /><em><strong>-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>