<p><strong>ಬೆಂಗಳೂರು: </strong>ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಬುಧವಾರ ಭೇಟಿಯಾಗಿ ಸುಮಾರು ಹದಿನೈದು ನಿಮಿಷಗಳ ಕಾಲ ಗುಪ್ತ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.</p>.<p>ಸದಾಶಿವನಗರ ಮನೆಯಲ್ಲಿ ಭೇಟಿಯಾಗಿ ಹೊನ್ನಾಳಿ ಚನ್ನಪ್ಪಸ್ವಾಮಿ ಮಠದಲ್ಲಿ ಮಾರ್ಚ್ 5ರಿಂದ ನಡೆಯಲಿರುವ ಕೃಷಿ ಮೇಳಕ್ಕೆ ಆಹ್ವಾನ ನೀಡಿದರು.ಹರಿಹರ ಮಾಜಿ ಶಾಸಕ ಬಿ.ಪಿ.ಹರೀಶ್ ಸಹ ಇದ್ದರು.</p>.<p>ಈ ಸಂದರ್ಭದಲ್ಲಿ ಶಿವಕುಮಾರ್, ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್, ರೇಣುಕಾಚಾರ್ಯ ಗುಪ್ತವಾಗಿ ಮಾತುಕತೆ ನಡೆಸಿದರು. ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಸಚಿವ ಸ್ಥಾನಕ್ಕೆ ಪ್ರಯತ್ನ ನಡೆಸಿರುವ ಸಿ.ಪಿ.ಯೋಗೇಶ್ವರ ಅವರಿಗೆ ಸಂಬಂಧಿಸಿದ ವಿಚಾರಗಳು ಚರ್ಚೆಯಾದವು ಎಂದು ಮೂಲಗಳು ತಿಳಿಸಿವೆ.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿಯಾಗಿ ಕೃಷಿ ಮೇಳಕ್ಕೆ ರೇಣುಕಾಚಾರ್ಯ ಆಹ್ವಾನ ನೀಡಿದ್ದರು.</p>.<p><strong>ಜೆಡಿಎಸ್ ಶಾಸಕ ಭೇಟಿ:</strong></p>.<p>ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ಗೌಡ ಸಹ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದು, ಆ ಪಕ್ಷದಿಂದಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜೆಡಿಎಸ್ ವರಿಷ್ಠರ ಜತೆಗೆ ಅಂತರ ಕಾಯ್ದುಕೊಂಡಿದ್ದರು. ಹಾಗಾಗಿ ಇವರ ಭೇಟಿ ಮಹತ್ವ ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಬುಧವಾರ ಭೇಟಿಯಾಗಿ ಸುಮಾರು ಹದಿನೈದು ನಿಮಿಷಗಳ ಕಾಲ ಗುಪ್ತ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.</p>.<p>ಸದಾಶಿವನಗರ ಮನೆಯಲ್ಲಿ ಭೇಟಿಯಾಗಿ ಹೊನ್ನಾಳಿ ಚನ್ನಪ್ಪಸ್ವಾಮಿ ಮಠದಲ್ಲಿ ಮಾರ್ಚ್ 5ರಿಂದ ನಡೆಯಲಿರುವ ಕೃಷಿ ಮೇಳಕ್ಕೆ ಆಹ್ವಾನ ನೀಡಿದರು.ಹರಿಹರ ಮಾಜಿ ಶಾಸಕ ಬಿ.ಪಿ.ಹರೀಶ್ ಸಹ ಇದ್ದರು.</p>.<p>ಈ ಸಂದರ್ಭದಲ್ಲಿ ಶಿವಕುಮಾರ್, ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್, ರೇಣುಕಾಚಾರ್ಯ ಗುಪ್ತವಾಗಿ ಮಾತುಕತೆ ನಡೆಸಿದರು. ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಸಚಿವ ಸ್ಥಾನಕ್ಕೆ ಪ್ರಯತ್ನ ನಡೆಸಿರುವ ಸಿ.ಪಿ.ಯೋಗೇಶ್ವರ ಅವರಿಗೆ ಸಂಬಂಧಿಸಿದ ವಿಚಾರಗಳು ಚರ್ಚೆಯಾದವು ಎಂದು ಮೂಲಗಳು ತಿಳಿಸಿವೆ.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿಯಾಗಿ ಕೃಷಿ ಮೇಳಕ್ಕೆ ರೇಣುಕಾಚಾರ್ಯ ಆಹ್ವಾನ ನೀಡಿದ್ದರು.</p>.<p><strong>ಜೆಡಿಎಸ್ ಶಾಸಕ ಭೇಟಿ:</strong></p>.<p>ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ಗೌಡ ಸಹ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದು, ಆ ಪಕ್ಷದಿಂದಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜೆಡಿಎಸ್ ವರಿಷ್ಠರ ಜತೆಗೆ ಅಂತರ ಕಾಯ್ದುಕೊಂಡಿದ್ದರು. ಹಾಗಾಗಿ ಇವರ ಭೇಟಿ ಮಹತ್ವ ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>