‘ಲಿಂಗಾಯತರು ಯಡಿಯೂರಪ್ಪ ಅವರಿಗೆ ಮೊದಲಿನಂತೆ ರೀತಿ ಇರುವುದಿಲ್ಲ. ಒಕ್ಕಲಿಗರು ಕುಮಾರಸ್ವಾಮಿಗೆ ಮೊದಲಿನಂತೆ ಇರುವುದಿಲ್ಲ.ಈ ಪರಿಸ್ಥಿತಿಯನ್ನು ಬಳಸಿಕೊಳ್ಳಲು ಕಾಂಗ್ರೆಸ್ಸಿಗರಿಗೆ ಗೊತ್ತಿಲ್ಲ. ಡಿ.ಕೆ ಶಿವಕುಮಾರ್ ಮೆರವಣಿಗೆ ಬರುವ ವೇಳೆ ಜೆಡಿಎಸ್–ಕಾಂಗ್ರೆಸ್ ಬಾವುಟ ಹಿಡಿದುಕೊಂಡು ಬರುತ್ತಾರೆ ಎಂದರೆ ಏನರ್ಥ? ಜೆಡಿಎಸ್ ಜೊತೆ ಯಾವುದೇ ಸಂಬಂಧ ಇಲ್ಲ ಎಂದು ನಾನು ಈಗಾಗಲೇ ಘೋಷಿಸಿದ್ದೇನೆ,’ ಎಂದು ಸಿದ್ದರಾಮಯ್ಯ ಅವರು ಆ ವಿಡಿಯೊದಲ್ಲಿ ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.