ಪಕ್ಷದ ಕಚೇರಿಯಲ್ಲಿ ಗುರುವಾರ ಇಬ್ಬರಿಗೂ ಬಿ ಫಾರಂ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೆಲವು ಹಿಂದುಳಿದ ಸಮುದಾಯ ಮತ್ತು ಅಲ್ಪಸಂಖ್ಯಾತ ಸಮುದಾಯದ ನಾಯಕರ ನಿವೃತ್ತಿಯ ಕಾರಣ ಹಾಗೂ ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಈ ಆಯ್ಕೆ ಮಾಡಲಾಗಿದೆ. ವಿಧಾನಸಭೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ ಸಹಿತ ಇತರ ಚುನಾವಣೆಗಳಲ್ಲಿ ಪಕ್ಷದ ಯುವ ಮತ್ತು ಸಕ್ರಿಯ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು’ ಎಂದರು.